Featured

ಹೆಜಮಾಡಿ ಟೋಲ್ ಗೇಟ್ ನಲ್ಲಿ ಹಗಲು ದರೋಡೆ : ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ – vishwanews24

ಹೆಜಮಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ: ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ

ಪಡುಬಿದ್ರಿ:  ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ.

ಹೆಜಮಾಡಿ ಟೋಲ್ ಗೇಟ್ ನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬಸ್ಸು ಮಾಲಕರ ಸಂಘ ಹಾಗೂ ಕರಾವಳಿ ಬಸ್ಸು ಮಾಲಕರ ಸಂಘದ ಪದಾಧಿಕಾರಿಗಳು ಬುಧವಾರ ಸಾಂಕೇತಿಕವಾಗಿ ಪ್ರತಿಭಟಿಸಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ತಮ್ಮ ಮಿನಿ ಬಸ್ಸುಗಳಿಗೆ ಘನ ವಾಹನಗಳ ಟೋಲನ್ನು ಕಡಿತಗೊಳಿಸಲಾಗುತ್ತಿದ್ದು, ಅವೈಜ್ಞಾನಿಕವಾಗಿರುವ ಈ ಕ್ರಮವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಬಸ್ಸುಗಳನ್ನೆಲ್ಲಾ ಟೋಲ್ ಗೆ ಅಡ್ಡವಾಗಿರಿಸಿ ತೀವ್ರತರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಫಾಸ್ಟ್ಟ್ಯಾಗ್ ಮೊತ್ತದ ಹೊರತಾಗಿಯೂ ಮತ್ತೆ ತಮಗೆ ಬರೆ ಬೀಳುತ್ತಿದೆ. ದೇಶದ ಎಲ್ಲೂ ಇಲ್ಲದ ಪರಿಸ್ಥಿತಿ ಇಲ್ಲಿದೆ. ನಮಗೆ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ಮಾಡಲಿರುವುದಾಗಿ ದಿಲ್ ರಾಜ್ ಆಳ್ವ ಹೇಳಿದರು.

ಕೆನರಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮಾತನಾಡಿ. ಹೆಜಮಾಡಿ, ಸಾಸ್ತಾನ, ಶಿರೂರುಗಳಲ್ಲಿ ಪ್ರತಿ ಬಸ್ ಗಳಿಂದ ದಿನಕ್ಕೆ 700 ರೂ.ನಷ್ಟು ಮೊತ್ತ ಟೋಲ್ ಹೆಸರಲ್ಲಿ ಸುಲಿಗೆಯಾಗುತ್ತಿದೆ ಎಂದು ದೂರಿದರು.

ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಟೋಲ್ ಹೆಸರಿನಲ್ಲಿ ಹಗಲು ದರೋಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ಮಾಲಕರಾದ ಜೀವಂಧರ್ ಬಲ್ಲಾಳ್, ರಝಾಕ್ ಮೊದಲಾದವರು ಭಾಗವಹಿಸಿದ್ದರು.

Vishwa News 24

Recent Posts

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

60 minutes ago

ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ಧರ್ಮೋಪದೇಶ ನೀಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ – vishwanews24

ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…

1 hour ago

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…

2 hours ago

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ…

3 hours ago

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – vishwanews24

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ…

3 hours ago

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…

3 hours ago