ಕಾಪು : ಕೇರಳದ ವಿದ್ಯಾರ್ಥಿಗಳ ಗುಂಪೊಂದು ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ರಸ್ತೆ ಮಧ್ಯದಲ್ಲೇ ನೃತ್ಯ ಮಾಡಿ, ಪಟಾಕಿ ಸಿಡಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆ ನಡೆದಿದೆ.
ಉಡುಪಿಗೆ ಪ್ರವಾಸಕ್ಕೆಂದು ಕೇರಳದಿಂದ ಎರಡು ಬಸ್ಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಟೋಲ್ ಗೇಟ್ ಬಳಿ ಬಸ್ಗಳನ್ನು ನಿಲ್ಲಿಸಿದ ವಿದ್ಯಾರ್ಥಿಗಳು, ರಸ್ತೆಗಿಳಿದು ನೃತ್ಯ ಮಾಡಲು ಮತ್ತು ಪಟಾಕಿ ಸಿಡಿಸಲು ಆರಂಭಿಸಿದ್ದಾರೆ. ಇದರಿಂದಾಗಿ ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ವರದಿಯಾಗಿದೆ.
ಜನನಿಬಿಡ ಈ ರಸ್ತೆಯಲ್ಲಿ ವಿದ್ಯಾರ್ಥಿಗಳ ಈ ಬೇಜವಾಬ್ದಾರಿ ವರ್ತನೆಯು ಸಾರ್ವಜನಿಕರಲ್ಲಿ ಸುರಕ್ಷತೆಯ ಬಗ್ಗೆ ಆತಂಕ ಸೃಷ್ಟಿಸಿದೆ. ವಿದ್ಯಾರ್ಥಿಗಳ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…