ಮಂಗಳೂರು : ಹೆಜಮಾಡಿ ಟೋಲ್ ಗೇಟ್ ನಲ್ಲಿ ಸ್ಥಳೀಯರಿಂದ ಬಲವಂತವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಫೆಬ್ರವರಿ 5 ರಂದು ಮುಲ್ಕಿ ಹೋಬಳಿ ಬಂದ್ ಗೆ ನಿರ್ಧರಿಸಲಾಗಿದೆ.
ಹೆಜಮಾಡಿ ಹಾಗೂ ಸುರತ್ಕಲ್ ಟೋಲ್ ನಿಂದ ಮೂಲ್ಕಿ ವಲಯ ಕಾರು ಚಾಲಕ ಮಾಲೀಕರಿಗೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನಾರ್ಥವಾಗಿ ಈ ಬಂದ್ ಆಚರಿಸಲಾಗುವುದು.
ಹೆಜಮಾಡಿ ಟೋಲ್ ವಸೂಲಾತಿಯಿಂದ ಕೇವಲ ಅರ್ಧ ಕಿಲೋಮೀಟರ್ ದೂರವಿರುವ ಮೂಲ್ಕಿ ಜನತೆಗೆ ಅನ್ಯಾಯವಾಗುತ್ತಿದ್ದು. ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರು ಕೂಡ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂಧಿಸಿಲ್ಲ ಎಂದು ಆರೋಪಿಸಲಾಗಿದೆ.
ಇನ್ನು ಈ ವಿಚಾರವಾಗಿ ಇಂದು ಸಭೆ ನಡೆಯಲಿದ್ದು, ಸಭೆಯಲ್ಲಿ ಸಂಸದರು, ಉಭಯ ಜಿಲ್ಲೆಗಳ ಶಾಸಕರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲು ಸಭೆ ನಡೆಸಲಾಗುತ್ತಿದ್ದು, ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ಫೆಬ್ರವರಿ 5ರಂದು ಹೆಜಮಾಡಿ ಟೋಲ್ ವಿರುದ್ಧ ಜನಪ್ರತಿನಿಧಿಗಳ ನೇತೃತ್ವದಲ್ಲಿ ಹೆಜಮಾಡಿ ಟೋಲ್ ಕೇಂದ್ರಕ್ಕೆ ಪಾದಯಾತ್ರೆ ನಡೆಸಿ ಸತ್ಯಾಗ್ರಹ ನಡೆಸುವ ನಿರ್ಣಯ ಕೈಗೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…