ಮಂಗಳೂರು : ಹೆಜಮಾಡಿ ಟೋಲ್ ಗೇಟ್ ನಲ್ಲಿ ಸ್ಥಳೀಯರಿಂದ ಬಲವಂತವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಫೆಬ್ರವರಿ 5 ರಂದು ಮುಲ್ಕಿ ಹೋಬಳಿ ಬಂದ್ ಗೆ ನಿರ್ಧರಿಸಲಾಗಿದೆ.
ಹೆಜಮಾಡಿ ಹಾಗೂ ಸುರತ್ಕಲ್ ಟೋಲ್ ನಿಂದ ಮೂಲ್ಕಿ ವಲಯ ಕಾರು ಚಾಲಕ ಮಾಲೀಕರಿಗೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನಾರ್ಥವಾಗಿ ಈ ಬಂದ್ ಆಚರಿಸಲಾಗುವುದು.
ಹೆಜಮಾಡಿ ಟೋಲ್ ವಸೂಲಾತಿಯಿಂದ ಕೇವಲ ಅರ್ಧ ಕಿಲೋಮೀಟರ್ ದೂರವಿರುವ ಮೂಲ್ಕಿ ಜನತೆಗೆ ಅನ್ಯಾಯವಾಗುತ್ತಿದ್ದು. ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರು ಕೂಡ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂಧಿಸಿಲ್ಲ ಎಂದು ಆರೋಪಿಸಲಾಗಿದೆ.
ಇನ್ನು ಈ ವಿಚಾರವಾಗಿ ಇಂದು ಸಭೆ ನಡೆಯಲಿದ್ದು, ಸಭೆಯಲ್ಲಿ ಸಂಸದರು, ಉಭಯ ಜಿಲ್ಲೆಗಳ ಶಾಸಕರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲು ಸಭೆ ನಡೆಸಲಾಗುತ್ತಿದ್ದು, ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ಫೆಬ್ರವರಿ 5ರಂದು ಹೆಜಮಾಡಿ ಟೋಲ್ ವಿರುದ್ಧ ಜನಪ್ರತಿನಿಧಿಗಳ ನೇತೃತ್ವದಲ್ಲಿ ಹೆಜಮಾಡಿ ಟೋಲ್ ಕೇಂದ್ರಕ್ಕೆ ಪಾದಯಾತ್ರೆ ನಡೆಸಿ ಸತ್ಯಾಗ್ರಹ ನಡೆಸುವ ನಿರ್ಣಯ ಕೈಗೊಂಡಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…