ಕಾಪು : ಹೆಜಮಾಡಿ ನಾಗರಿಕರ ಹಿತರಕ್ಷಣಾ ಸಮಿತಿಯ ನೇತ್ರತ್ವದಲ್ಲಿ ಪಡುಬಿದ್ರಿ, ಹೆಜಮಾಡಿ,ಮುಲ್ಕಿ ಭಾಗದ ಸ್ಥಳೀಯರಿಗೆ ಟೋಲ್ ವಿನಾಯಿತಿ ಕೋರಿ ಹೆಜಮಾಡಿ ಟೋಲ್ ಗೇಟ್ ಬಳಿ ಬುಧವಾರ ಪ್ರತಿಭಟನೆ ನಡೆಯಿತು.
ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿರುವ ಹಿನ್ನಲೆಯಲ್ಲಿ ಹೆಜಮಾಡಿ ಟೋಲ್ ಗೇಟ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ,ಹೆಜಮಾಡಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಶೇಖರ್ ಹೆಜಮಾಡಿ,ಮುಲ್ಕಿ ನಾಗರಿಕರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಎನ್ ಪುತ್ರನ್,ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಲ್ಕಿ,ಹೆಜಮಾಡಿ, ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಟೋಲ್ ವಿನಾಯಿತಿ ಬಗ್ಗೆ ಎನ್.ಎಚ್ ಪ್ರತಿನಿಧಿ ಮಲ್ಲಿಕಾರ್ಜುನ ಇವರಿಗೆ ಮನವಿ ಸಲ್ಲಿಸಲಾಯಿತು.ರೋಲ್ಫಿ ಡಿಕೋಸ್ಟ,ಸುಭಾಸ್ ಬಿ ಶೆಟ್ಟಿ, ಸತೀಶ್ ಅಂಚನ್ ,ಮಧು ಆಚಾರ್ಯ, ಹಾಜಿ ಶೇಖಬ್ಬ ಕೋಟೆ, ನವೀನ್ ಚಂದ್ರ ಜೆ ಶೆಟ್ಟಿ, ಸನಾ ಇಬ್ರಾಹಿಂ,ಸುದೀರ್ ಕರ್ಕೇರ, ಪಾಂಡುರಂಗ ಕರ್ಕೇರ, ಸುಧಾಕರ್ ಎರ್ಮಾಳು, ನವೀನ್ ಎನ್.ಶೆಟ್ಟಿ,ಪ್ರಾಣೇಶ್ ಹೆಜಮಾಡಿ,ರವಿ ಶೆಟ್ಟಿ, ಇಕ್ಬಾಲ್ ಮುಲ್ಕಿ, ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…