ಕಾಪು : ಹೆಜಮಾಡಿ ನಾಗರಿಕರ ಹಿತರಕ್ಷಣಾ ಸಮಿತಿಯ ನೇತ್ರತ್ವದಲ್ಲಿ ಪಡುಬಿದ್ರಿ, ಹೆಜಮಾಡಿ,ಮುಲ್ಕಿ ಭಾಗದ ಸ್ಥಳೀಯರಿಗೆ ಟೋಲ್ ವಿನಾಯಿತಿ ಕೋರಿ ಹೆಜಮಾಡಿ ಟೋಲ್ ಗೇಟ್ ಬಳಿ ಬುಧವಾರ ಪ್ರತಿಭಟನೆ ನಡೆಯಿತು.
ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿರುವ ಹಿನ್ನಲೆಯಲ್ಲಿ ಹೆಜಮಾಡಿ ಟೋಲ್ ಗೇಟ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ,ಹೆಜಮಾಡಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಶೇಖರ್ ಹೆಜಮಾಡಿ,ಮುಲ್ಕಿ ನಾಗರಿಕರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಎನ್ ಪುತ್ರನ್,ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಲ್ಕಿ,ಹೆಜಮಾಡಿ, ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಟೋಲ್ ವಿನಾಯಿತಿ ಬಗ್ಗೆ ಎನ್.ಎಚ್ ಪ್ರತಿನಿಧಿ ಮಲ್ಲಿಕಾರ್ಜುನ ಇವರಿಗೆ ಮನವಿ ಸಲ್ಲಿಸಲಾಯಿತು.ರೋಲ್ಫಿ ಡಿಕೋಸ್ಟ,ಸುಭಾಸ್ ಬಿ ಶೆಟ್ಟಿ, ಸತೀಶ್ ಅಂಚನ್ ,ಮಧು ಆಚಾರ್ಯ, ಹಾಜಿ ಶೇಖಬ್ಬ ಕೋಟೆ, ನವೀನ್ ಚಂದ್ರ ಜೆ ಶೆಟ್ಟಿ, ಸನಾ ಇಬ್ರಾಹಿಂ,ಸುದೀರ್ ಕರ್ಕೇರ, ಪಾಂಡುರಂಗ ಕರ್ಕೇರ, ಸುಧಾಕರ್ ಎರ್ಮಾಳು, ನವೀನ್ ಎನ್.ಶೆಟ್ಟಿ,ಪ್ರಾಣೇಶ್ ಹೆಜಮಾಡಿ,ರವಿ ಶೆಟ್ಟಿ, ಇಕ್ಬಾಲ್ ಮುಲ್ಕಿ, ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…