ಪಡುಬಿದ್ರಿ : ಹೆಜಮಾಡಿ ಒಳ ರಸ್ತೆಯ ಟೋಲ್ ಪ್ಲಾಝಾದ ಎರಡೂ ಬದಿಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವ ಟೋಲ್ ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೆಜಮಾಡಿ ಗ್ರಾಪಂ, ಸ್ಥಳಕ್ಕೆ ಆಗಮಿಸಿ ಸೊತ್ತುಗಳನ್ನು ವಶಪಡಿಸಿಕೊಂಡು ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ಗುರುವಾರ ನಡೆದಿದೆ.
ಈ ಹಿಂದೆ ಜಿಲ್ಲಾಡಳಿತ ನಿರ್ದೇಶಿಸಿದಂತೆ ಹೆಜಮಾಡಿ ಒಳ ರಸ್ತೆಯ ಪ್ರತ್ಯೇಕ ಟೋಲ್ ನಲ್ಲಿ ಶಾಲಾ ವಾಹನ ಸಹಿತ ಹೆಜಮಾಡಿ ಗ್ರಾಮಸ್ಥರ ವಾಹನಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗುತ್ತಿತ್ತು. ಇತ್ತೀಚೆಗೆ ಕೆಲವೊಂದು ಸ್ಥಳೀಯ ವಾಹನಗಳಿಗೆ ಮತ್ತು ಶಾಲಾ ವಾಹನಗಳಿಂದಲೂ ಟೋಲ್ ಸಂಗ್ರಹಕ್ಕೆ ಗುತ್ತಿಗೆ ಕಂಪೆನಿ ಮುಂದಾಗಿತ್ತು. ಈ ಬಗ್ಗೆ ದೂರು ಪಡೆದ ಹೆಜಮಾಡಿ ಗ್ರಾಪಂ ಸೋಮವಾರ ಟೋಲ್ನ ಎರಡೂ ಬದಿಗಳಲ್ಲಿ ಪ್ರತ್ಯೇಕ ರಸ್ತೆ ನಿರ್ಮಾಣಕ್ಕೆ ಮುಂದಾಗಿತ್ತು. ಒಂದು ಬದಿಯಲ್ಲಿ ಪ್ರತ್ಯೇಕ ರಸ್ತೆಯನ್ನೂ ನಿರ್ಮಿಸಲಾಗಿತ್ತು. ಪೋಲಿಸರ ಮಧ್ಯಪ್ರವೇಶದ ಬಳಿಕ ಸದಸ್ಯರು ಹಿಂದಿರುಗಿ, ತುರ್ತು ಸಭೆ ಕರೆದು ಪರವಾನಿಗೆರಹಿತ ಒಳ ರಸ್ತೆಯ ಟೋಲ್ ಸ್ಥಗಿತಕ್ಕೆ ನಿರ್ಣಯಿಸಿ ಟೋಲ್ ಪ್ಲಾಝಾ ಗೋಡೆಗೆ ಅಂಟಿಸಿದ್ದರು.
ಜಿಲ್ಲಾಧಿಕಾರಿ ಆದೇಶದ ಕಡೆಗಣನೆ
ಸೋಮವಾರ ನಡೆದ ಘಟನೆಯ ಮಾಹಿತಿ ಅರಿತ ಜಿಲ್ಲಾಡಳಿತ ಎರಡೂ ಕಡೆಯವರನ್ನು ಬುಧವಾರ ಕರೆಸಿ ಚರ್ಚೆ ಬಳಿಕ ಸದ್ಯ ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಲಾಗಿತ್ತು. ಉಡುಪಿ ಜಿಲ್ಲಾಧಿಕಾರಿ ಸಮ್ಮುಖ ನಡೆದ ಸಭೆಯಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿರ್ದೇಶನ ನೀಡಿದ್ದರೂ, ಕೆಕೆಆರ್ ಟೋಲ್ ಕಂಪೆನಿಯು ಗುರುವಾರ ಬೆಳಗ್ಗೆ ಒಳ ರಸ್ತೆಯ ಟೋಲ್ ನ ಎರಡೂ ಬದಿಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗುರುವಾರ ಬೆಳಗ್ಗೆ ಟೋಲ್ ಕಂಪೆನಿಯು ಪ್ರತ್ಯೇಕವಾಗಿ ನಿರ್ಮಿಸಿದ ಜಾಗದಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಟೋಲ್ ಕಂಪೆನಿ ಮುಂದಾಗಿತ್ತು. ವಿಷಯ ತಿಳಿದ ಹೆಜಮಾಡಿ ಗ್ರಾಮ ಪಂಚಾಯತ್ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಕಾಮಗಾರಿ ಸ್ಥಗಿತಗೊಳಿಸಿ ಪಂಚಾಯತ್ ವತಿಯಿಂದ ಅವರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂದರ್ಭ ಆಗಮಿಸಿದ ಅಧಿಕಾರಿಗಳ ಹಾಗೂ ಪಂಚಾಯತ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಟೋಲ್ ಮ್ಯಾನೇಜರ್ ತಿಮ್ಮಯ್ಯ ಟೋಲ್ ಕಾಮಗಾರಿ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಪಡುಬಿದ್ರೆ ಠಾಣಾಧಿಕಾರಿ ಸಕ್ತಿವೇಲು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿ ಜಿಲ್ಲಾಡಳಿತದ ಆದೆಶ ಪಾಲಿಸುವಂತೆ ನಿರ್ದೇಶನ ನೀಡಿದರು. ಹೆಜಮಾಡಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಎ. ಮೆಂಡನ್, ಉಪಾಧ್ಯಕ್ಷ ಮೋಹನ್ ಸುವರ್ಣ, ಸದಸ್ಯರಾದ ಶರಣ್ ಕುಮಾರ್ ಮಟ್ಟು, ಪ್ರಾಣೇಶ್ ಹೆಜ್ಮಾಡಿ, ಕಬೀರ್, ಜನಾರ್ದನ ಕೋಟ್ಯಾನ್, ಪವಿತ್ರಾ ಗಿರೀಶ್, ಹೆಜಮಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸುಧಾಕರ ಕರ್ಕೇರ, ಲೋಕೇಶ್ ಅಮೀನ್, ಎಚ್. ರವಿ ಕುಂದರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…