ಉಡುಪಿ : ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ನಂತರ ಟೋಲ್ ಗೇಟ್ ಗಳಲ್ಲಿ ದುಬಾರಿ ಟೋಲ್ ಈಗ ಬಸ್ ಮಾಲಕರಿಗೆ ಸಂಕಷ್ಟ ತಂದೊಡ್ಡಿದೆ. ದಕ್ಷಿಣಕನ್ನಡ ಜಿಲ್ಲೆಯ ತಲಪಾಡಿಯಲ್ಲಿ ಗಲಾಟೆ ನಂತರ ಇದೀಗ ಉಡುಪಿ ಹೆಜಮಾಡಿ ಟೋಲ್ ಗೇಟ್ ನಲ್ಲೂ ಸಮಸ್ಯೆ ಪ್ರಾರಂಭವಾಗಿದ್ದು, ಹೆಜಮಾಡಿ ಟೋಲ್ ಮೂಲಕ ಸಾಗುವ ಬಸ್ಸುಗಳಿಗೂ ದುಬಾರಿ ಶುಲ್ಕವನ್ನು ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ಮಾರ್ಚ್15 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಮಾಲಕರು ನಿರ್ಧರಿಸಿದ್ದಾರೆ.
ದುಬಾರಿ ಶುಲ್ಕದಿಂದ ಬಸ್ ಮಾಲಕರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಈಗಾಗಲೇ ತಿಂಗಳಿಗೆ 15 ಸಾವಿರ ರೂಪಾಯಿ ಆರ್ ಟಿ ಒ ತೆರಿಗೆ ಪಾವತಿಸುತ್ತೇವೆ. ಬದಲಾದ ಸನ್ನಿವೇಶದಲ್ಲಿ ಟ್ರಿಪ್ಪಿನ ಮೇಲೆ 250 ರೂಪಾಯಿ ಹೆಚ್ಚುವರಿ ನೀಡಬೇಕಾಗುತ್ತದೆ. ಹಾಗಾಗಿ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ತಕ್ಷಣವೇ ಮಧ್ಯೆ ಪ್ರವೇಶ ಮಾಡಿ ಸಮಸ್ಯೆಗೆ ಪರಿಹಾರ ನೀಡಬೇಕು.
ಪುತ್ತೂರು : ಗೋಡಂಬಿ ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಸಾವು -Vishwanews24
ಸ್ವಲ್ಪ ಪ್ರಮಾಣದ ಟೋಲ್ ಪಾವತಿಗೆ ಸಿದ್ಧರಿದ್ದೇವೆ, ಆದರೆ ಹೊಸ ಪದ್ಧತಿಯಂತೆ, ಮಾಸಿಕ 25ಸಾವಿರ ರೂಪಾಯಿಗೂ ಅಧಿಕ ಸುಂಕ ಪಾವತಿಸಲು ನಮ್ಮಿಂದ ಸಾಧ್ಯವಿಲ್ಲ. ಈ ಮಾರ್ಗದಲ್ಲಿ ಸುಮಾರು 40 ಬಸ್ ಗಳು ಸಂಚರಿಸುತ್ತಿದ್ದು, ಕೊರೋನಾ ಬಂದ ಆನಂತರ 32 ಬಸ್ಸುಗಳು ಮಾತ್ರ ರಸ್ತೆಗಿಳಿದಿವೆ. ದುಬಾರಿ ಟೋಲ್ ಕಟ್ಟಿ ಸಂಚಾರ ನಡೆಸುವುದು ಕಷ್ಟಕರವಾಗಿದ್ದು, ಅನಿವಾರ್ಯವಾಗಿ ಬಸ್ ಸಂಚಾರ ಸ್ಥಗಿತಗೊಳಿಸಬೇಕಾಗಿದೆ ಎಂದು ಬಸ್ ಮಾಲಕರು ತಿಳಿಸಿದ್ದಾರೆ.
ಪಶ್ಚಿಮಬಂಗಾಳ ಚುನಾವಣಾ ಪ್ರಚಾರ: ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಭದ್ರತೆ -Vishwanews24
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…