Featured

ಹೆಜಮಾಡಿ ದುಬಾರಿ ಟೋಲ್ ; ಮಾರ್ಚ್15 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಮುಂದಾದ ಖಾಸಗಿ ಬಸ್ ಮಾಲಕರು -Vishwanews24

ಹೆಜಮಾಡಿ  ದುಬಾರಿ ಟೋಲ್ ; ಮಾರ್ಚ್15 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಮುಂದಾದ ಖಾಸಗಿ ಬಸ್ ಮಾಲಕರು -Vishwanews24

ಉಡುಪಿ : ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ನಂತರ ಟೋಲ್ ಗೇಟ್ ಗಳಲ್ಲಿ ದುಬಾರಿ ಟೋಲ್ ಈಗ ಬಸ್ ಮಾಲಕರಿಗೆ ಸಂಕಷ್ಟ ತಂದೊಡ್ಡಿದೆ. ದಕ್ಷಿಣಕನ್ನಡ ಜಿಲ್ಲೆಯ ತಲಪಾಡಿಯಲ್ಲಿ ಗಲಾಟೆ ನಂತರ ಇದೀಗ ಉಡುಪಿ ಹೆಜಮಾಡಿ ಟೋಲ್ ಗೇಟ್ ನಲ್ಲೂ ಸಮಸ್ಯೆ ಪ್ರಾರಂಭವಾಗಿದ್ದು, ಹೆಜಮಾಡಿ ಟೋಲ್ ಮೂಲಕ ಸಾಗುವ ಬಸ್ಸುಗಳಿಗೂ ದುಬಾರಿ ಶುಲ್ಕವನ್ನು ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ಮಾರ್ಚ್15 ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಮಾಲಕರು ನಿರ್ಧರಿಸಿದ್ದಾರೆ.

ಜಾರಕಿಹೊಳಿ ಸಿಡಿ ಪ್ರಕರಣ : ಪೊಲೀಸರಿಗೆ ತನಿಖೆಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ : ಬಸವರಾಜ ಬೊಮ್ಮಾಯಿ -Vishwanews24

ದುಬಾರಿ ಶುಲ್ಕದಿಂದ ಬಸ್ ಮಾಲಕರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಈಗಾಗಲೇ ತಿಂಗಳಿಗೆ 15 ಸಾವಿರ ರೂಪಾಯಿ ಆರ್ ಟಿ ಒ ತೆರಿಗೆ ಪಾವತಿಸುತ್ತೇವೆ. ಬದಲಾದ ಸನ್ನಿವೇಶದಲ್ಲಿ ಟ್ರಿಪ್ಪಿನ ಮೇಲೆ 250 ರೂಪಾಯಿ ಹೆಚ್ಚುವರಿ ನೀಡಬೇಕಾಗುತ್ತದೆ. ಹಾಗಾಗಿ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ತಕ್ಷಣವೇ ಮಧ್ಯೆ ಪ್ರವೇಶ ಮಾಡಿ ಸಮಸ್ಯೆಗೆ ಪರಿಹಾರ ನೀಡಬೇಕು.

ಪುತ್ತೂರು : ಗೋಡಂಬಿ ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಸಾವು -Vishwanews24

ಸ್ವಲ್ಪ ಪ್ರಮಾಣದ ಟೋಲ್ ಪಾವತಿಗೆ ಸಿದ್ಧರಿದ್ದೇವೆ, ಆದರೆ ಹೊಸ ಪದ್ಧತಿಯಂತೆ, ಮಾಸಿಕ 25ಸಾವಿರ ರೂಪಾಯಿಗೂ ಅಧಿಕ ಸುಂಕ ಪಾವತಿಸಲು ನಮ್ಮಿಂದ ಸಾಧ್ಯವಿಲ್ಲ. ಈ ಮಾರ್ಗದಲ್ಲಿ ಸುಮಾರು 40 ಬಸ್ ಗಳು ಸಂಚರಿಸುತ್ತಿದ್ದು, ಕೊರೋನಾ ಬಂದ ಆನಂತರ 32 ಬಸ್ಸುಗಳು ಮಾತ್ರ ರಸ್ತೆಗಿಳಿದಿವೆ. ದುಬಾರಿ ಟೋಲ್ ಕಟ್ಟಿ ಸಂಚಾರ ನಡೆಸುವುದು ಕಷ್ಟಕರವಾಗಿದ್ದು, ಅನಿವಾರ್ಯವಾಗಿ ಬಸ್ ಸಂಚಾರ ಸ್ಥಗಿತಗೊಳಿಸಬೇಕಾಗಿದೆ ಎಂದು ಬಸ್ ಮಾಲಕರು ತಿಳಿಸಿದ್ದಾರೆ.

ಪಶ್ಚಿಮಬಂಗಾಳ ಚುನಾವಣಾ ಪ್ರಚಾರ: ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಭದ್ರತೆ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

14 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

15 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

15 hours ago