ಕಾಪು : ಕರ್ನಾಟಕ ಸರ್ಕಾರ ಪಶುಸಂಗೋಪನ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೆಜಮಾಡಿ ಬಂದರು ಪ್ರದೇಶಕ್ಕೆ ಭೇಟಿ ನೀಡಿದರು. ಬಂದರು ಸಂಪರ್ಕ ರಸ್ತೆ ಕೋಟಿ ಅನುದಾನದಲ್ಲಿ ಇಷ್ಟರ ತನಕ ಕಾಮಗಾರಿ ಮುಗಿದು ಜನರ ಉಪಯೋಗಕ್ಕೆ ಬರಬೇಕಿತ್ತು. ಎಪ್ರಿಲ್ ತಿಂಗಳಲ್ಲಿ ಟೆಂಡರಾದ ಕಾಮಗಾರಿ ಚುನಾವಣಾ ನೀತಿ ಸಂಹಿತೆಯ ಕಾರಣ ವಿಳಂಭವಾಯಿತು. ಆದರೂ ಚುನಾವಣೆ ಮುಗಿದು ತಿಂಗಳು ಎರಡಾದರೂ ಕಾಮಗಾರಿ ಪ್ರಾರಂಭಿಸದೆ ಸಂಚಾರಕ್ಕೆ ಯೋಗ್ಯವಾಗಿರಲಿಲ್ಲ. ಸಚಿವರು ಬರುವ ಸೂಚನೆ ಸಿಕ್ಕದ ಕೂಡಲೇ ಗುತ್ತಿಗೆ ದಾರರು ರಾತೋರಾತ್ರಿ ರಸ್ತೆಗೆ ಜಲ್ಲಿ ಸುರಿದು ರಿಪೇರಿ ಪ್ರಾರಂಭಿಸಿದರು. ಜೆಸಿಬಿ ಕೈ ಕೊಟ್ಟಿದ್ದರಿಂದ ಕಾಮಗಾರಿ ಅರ್ಧದಲ್ಲಿಯೇ ನಿಂತು. ಬಂದರು ಪ್ರದೇಶಕ್ಕೆ ಯಾವುದೇ ವಾಹನ ತೆರಳದಂತಾಯಿತು.
ಸಚಿವರ ಆಗಮನವಾಗುತಿದ್ದಂತೆಯೇ ಸಚಿವರಿಗೆ ಬಂದರ ದರ್ಶನ ಭಾಗ್ಯ ಲಭಿಸದೆ ದಾರಿಯಲ್ಲಿಯೇ ಅವರನ್ನು ಸ್ವಾಗತಿಸಿದರು. ಮಾಧ್ಯಮದೊಡನೆ ಮಾತನಾಡಿದ ನಾಡೆಗೌಡ ಈ ಪ್ರದೇಶದ ಬಂದರು ನಿರ್ಮಾಣಕ್ಕಾಗಿ ಕೆಂದ್ರ ಹಾಗು ರಾಜ್ಯ ಸರಕಾರ ಈಗಾಗಲೇ ಒಪ್ಪಿಕೊಂಡಿವೆ. ಇದರ ಬಗ್ಗೆ ಕರಾವಳಿಯನ್ನು ಯಾವುದೇ ರೀತಿಯಲ್ಲಿ ಸರಕಾರ ಕಡೆಗೆಣಿಸಿಲ್ಲ. ಹಿಂದಿನ ಸರಕಾರ ಏನು ಬಜೆಟ್ ಮಂಡಿಸಿದೆಯೋ ಅದನ್ನೆÃ ಮುಂದುರೆಸಿ ಕುಮಾರಸ್ವಾಮಿ ಸರ್ಕಾರ ಕಾರ್ಯ ವೆಸಗಲಿದೆ. ಇಲ್ಲಿ ಸಮುದ್ರದಲ್ಲಿ ತೇಲುವ ಜೆಟ್ಟಿಗಳನ್ನು ನಿರ್ಮಿಸು ಯೋಜನೆ ಇದೆ. ಸಮುದ್ರದಲ್ಲಿ ಇದನ್ನು ಮಾಡುವುದರಿಂದ ಯಾರದೇ ಪರವಾನಿಗೆ ಅಗತ್ಯ ಬೀಳುವುದಿಲ್ಲ. ಆಕ್ಷೆÃಪಣೆ ಗಳೂ ಬರುವುದಿಲ್ಲ. ಗೋವಾ ಮಾದರಿಯಲ್ಲಿ ಆಧುನಿಕ ತಂತ್ರಜ್ನಾನವನ್ನುಪಯೋಗಿಸಿ ಮಾಡಲಿದ್ದೆÃವೆ. ಇದರ ಬಗ್ಗೆ ತಜ್ಙರ ತಂಡವೊಂದನ್ನು ಗೋವಾಕ್ಕೆ ಕಳುಹಿಸಿ ಅಧ್ಯಯನ ಮಾಡಿ ಆಮೇಲೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ಮಡಲಿದ್ದೆÃವೆ ಎಂದರು.
ಈ ಸಂದರ್ಭ ಮುಲ್ಕಿ ಪರ್ಸಿನ್ ಮತ್ತು ಟ್ರಾಲ್ ಬೋಟು ಸಂಘದ ವಿಜಯ ಬಂಗೇರ ಮಾತನಾಡಿ “ಹೆಜಮಾಡಿ ಬಂದರು ಬಗ್ಗೆ ನಾವು ಕಳೆದ ೪೦ ವರ್ಷಗಳಿಂದ ಶತಪ್ರಯತ್ನ ಮಾಡಿದ್ದೆÃವೆ. ಈಗ ರಾಜ್ಯ ಮತ್ತು ಕೇಂದ್ರ ಸರಕಾರ ಇದರ ಬಗ್ಗೆ ಅನುಮೋದನೆ ಮಾಡಿದೆ. ರಾಜ್ಯ ಸರ್ಕಾರ ೫೦ ಶೇಕಡಾ ಕೊಡಲು ಒಪ್ಪಿದ್ದಾರೆ. ಇನ್ನಾದರೂ ಈ ಭಾಗಕ್ಕೆ ಬಂದರು ನಿರ್ಮಾಣ ಮಾಡಿದರೆ ನಮ್ಮ ಬಹುಕಾಲದ ಕನಸು ನನಸು” ಆದಂತಾಗುತ್ತದೆ ಎಂದರು.
ಸಚಿವರ ಜೊತೆಯಲ್ಲಿ ಶಾಸಕ ಲಾಲಜಿ ಮೆಂಡನ್,ಜೆಡಿಎಸ್ ಜಿಲ್ಲಾದ್ಯಕ್ಷ ಯೋಗೀಶ್ ಶೆಟ್ಟಿ , ಮುಂತಾದವರಿದ್ದರು.
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…