ಕಾಪು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ ಇಲ್ಲಿನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಬುಧವಾರ ಜರಗಿತು.
ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ಮಾಡಿ” ಮಾನವನಿಗೆ ಹೃದಯ ಎಷ್ಟು ಮುಖ್ಯವೂ ಗ್ರಾಮಕ್ಕೆ ದೇವಸ್ಥಾನ ಕೂಡ ಅಷ್ಟೇ ಮುಖ್ಯವಾಗಿದೆ ದೇವಸ್ಥಾನದ ಎಲ್ಲಾ ಪೂಜೆ ಪುರಸ್ಕಾರಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದರೆ ಆ ಗ್ರಾಮ ಸುಬೀಕ್ಷೆಯಾಗಿದೆ ಎಂದು ಅರ್ಥ ,ನಾವೂ ಪೂಜೆ ಮಾಡುವುದು ಮೂರ್ತಿಯಲ್ಲಿ ಅಂದರೆ ಮೂರ್ತಿಯೊಳಗೆ ದೇವರನ್ನು ಕಾಣಬಹುದಾಗಿದೆ ಎಂದರು ವಿಶೇಷವಾಗಿ ಹೆಜಮಾಡಿಯ ಪುಣ್ಯ ಮಣ್ಣಿನಲ್ಲಿ ರುದ್ರ ದೇವರು ಸಂಪೂರ್ಣವಾಗಿ ಭಕ್ತರನ್ನು ಅನುಗ್ರಹಿಸುವರು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಅನುಗ್ರಹ ಭಾಷಣ ಮಾಡಿ” ಅನು ಅನುವಿನ ಶಕ್ತಿ ಭಗವಂತ ಆತನ ಶಕ್ತಿ ಅಗಣ್ಯವಾಗಿದೆ,ಈ ಭೂಮಿಯಲ್ಲಿ ನಾವು ಒಳ್ಳೆಯ ವಿಚಾರ ನೋಡುವ ಮತ್ತು ಕೇಳುವ ಬದಲು ಅಹಿತಕರ ಘಟನೆ ನೋಡಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವಲ್ಲಿ ತಲ್ಲಿನರಾಗಿದ್ದೇವೆ ಎಂದರು.ದೇವಸ್ಥಾನದ ಒಳಗೆ ಪ್ರವೇಶ ಮಾಡುವಾಗ ಮೋಜು ಮಸ್ತಿ ಬಿಟ್ಟು ಗಂಭೀರತೆಯನ್ನು ಅರಿತು ದೇವರ ದರ್ಶನ ಮಾಡಬೇಕೆಂದರು.
ವೇದಿಕೆಯಲ್ಲಿ ಹೆಜಮಾಡಿ ಮಹಾಲಿಂಗೇಶ್ವರ ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಯಂತ ಶೆಟ್ಟಿ ಪೂಣೆ,ಕಾಪುವಿನ ಶಾಸಕ ಲಾಲಾಜಿ ಆರ್ ಮೆಂಡನ್,ಮಾಜಿ ಸಚಿವ ವಿನಯ ಕುಮಾರ್ ಸೊರಕೆ,ಸದಾನಂದ ಶೆಟ್ಟಿ ಪೂಣೆ,ಸದಾಶಿವ ಎಸ್ ಶೆಟ್ಟಿ, ಎಡಪದವು ರಾಧಕೃಷ್ಣ ತಂತ್ರಿ,ದೇವಸ್ಥಾನ ಅರ್ಚಕ ರಾಮಚಂದ್ರ ಭಟ್,ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಹೆಜಾಮಡಿ ಉಪಸ್ಥಿತರಿದ್ದರು.
ನವೀನ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು,ಆಡಳಿತ ಸಮಿತಿ ಅಧ್ಯಕ್ಷ ದಯಾನಂದ ಹೆಜಮಾಡಿ ಸ್ವಾಗತಿಸಿ, ದಮೋಧರ ಶರ್ಮ ಕಾರ್ಯಕ್ರಮ ನಿರೂಪಿಸಿದರು.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…