Featured

ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ – Vishwanews24

ಹೆಜಮಾಡಿ ವಿಠ್ಠಲ್ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸಂತಾಪ

ರಾಷ್ಟೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು ಹಾಗೂ ಸಮಾಜ ಸೇವಕ ವೇದಮೂರ್ತಿ ವಿಠ್ಠಲ ಭಟ್ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ ವ್ಯಕ್ತ ಪಡಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿ, ಹೆಜಮಾಡಿ ಮಲ್ಯರ ಮಠ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಅರ್ಚರಾಗಿ ಸೇವೆ ಸಲ್ಲಿಸಿರುವ ವೇದಮೂರ್ತಿ ವಿಠಲ್ ಭಟ್ ರವರು ಜು.1ರಂದು ನಿಧನರಾದರು.
ಅವಿವಾಹಿತರಾಗಿದ್ದ ಅವರಿಗೆ 89 ವರ್ಷ ವಯಸ್ಸಾಗಿತ್ತು. ಹೆಜಮಾಡಿ ಗ್ರಾಮವೂ ಸೇರಿದಂತೆ ಕಾಪು ತಾಲೂಕಿನಲ್ಲಿ ಸಂಘದ ಶಾಖೆಗಳೂ ಸೇರಿದಂತೆ ಹಿಂದು ಸಂಘಟನೆಯ ಕೆಲಸ ಕಾರ್ಯಗಳಿಗೆ ಅಡಿಪಾಯ ಹಾಕುವಲ್ಲಿ ಅವರ ಪಾತ್ರ ಅನನ್ಯವಾದುದು. ಅಯೋಧ್ಯಾ‌ ಹೋರಾಟದಲ್ಲಿ ಭಾಗವಹಿಸಿದ್ದ ಅವರು ಕರಸೇವೆಯಲ್ಲಿಯೂ‌ ಪಾಲ್ಗೊಂಡಿದ್ದರು. ಜನಸಂಘದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಠ್ಠಲ್ ಭಟ್ ರವರು ಡಾ! ವಿ.ಎಸ್. ಆಚಾರ್ಯ, ಕರಂಬಳ್ಳಿ ಸಂಜೀವ ಶೆಟ್ಟಿ, ಉಡುಪಿ ಸೋಮಶೇಖರ ಭಟ್ ಮುಂತಾದವರ ಒಡನಾಡಿಯಾಗಿದ್ದರು.
ಪ್ರಕೃತಿ ಪ್ರೇಮಿಯಾಗಿದ್ದ ವಿಠ್ಠಲ್ ಭಟ್ ರವರು ರಸ್ತೆಯ ಇಕ್ಕೆಲಗಳಲ್ಲಿ ಅನೇಕ ಮರಗಳನ್ನು ನೆಟ್ಟಿದ್ದರು. ಜೀವನಪೂರ್ತಿ ಹಿಂದು ಸಂಘಟನೆಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಿಠ್ಠಲ್ ಭಟ್ ರವರು ಅನೇಕರಿಗೆ ಪ್ರೇರಣಾಶಕ್ತಿಯಾಗಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಬಂಧುಗಳು ಮತ್ತು‌ ಹಿತೈಷಿಗಳಿಗೆ ಅವರ ಅಗಲುವಿಕೆಯ ದುಖ:ವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago