Featured

ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಮಗ್ರ ಜೀಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ.

ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಮಗ್ರ ಜೀಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ.

ಕಾಪು: ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಮಗ್ರ ಜೀಣೋದ್ಧಾರದ ಅಂಗವಾಗಿ ಆದಿತ್ಯವಾರ ದೇಗುಲದ ವಠಾರದಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಯನ್ನು ಉದ್ಯಮಿ ೨೦೧೯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ಕೆ ಪ್ರಕಾಶ್ ಶೆಟ್ಟಿ ನೆರವೇರಿಸಿದರು.ತದನಂತರ ಮಾತಾಡಿ ಈ ಐತಿಹಾಸಿಕ ದೇಗುಲ ನಿರ್ಮಾಣ ಕಾರ್ಯದಲ್ಲಿ ನನ್ನನ್ನು ಪಾಲುದಾರರನ್ನಾಗಿಸಿದ ದೇವರಿಗೆ ಹಾಗೂ ಕಮಿಟಿ ಸದಸ್ಯರಿಗೆ ವಂದನೆಗಳು, ತುಳುನಾಡಿನ ದೇವಸ್ಥಾನಗಳು ಜೀರ್ಣೋದ್ದಾರಗೊಂಡು ಮುಂದಿನ ಪೀಳಿಗೆಗೆ ಅದು ಕೊಡುಗೆಯಾಗಬೇಕು ಎಂದರು.ನೂತನ ದೇಗುಲದ ನೀಲನಕಾಶೆಯನ್ನು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ನೆರೆವೇರಿಸಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತಾಡಿ” ಹೆಜಮಾಡಿ ಉಡುಪಿ ಜಿಲ್ಲೆಯ ಹೆಬ್ಬಾಗಿಲು ಇಲ್ಲಿನ ದೇಗುಲ ನಿರ್ಮಾಣ ಆಗುವಂತಹ ಕಾರ್ಯ ಅತ್ಯಂತ ಸಂತಸ ಹಾಗೂ ಖುಷಿಯ ವಿಚಾರ, ಧಾರ್ಮಿಕ ಕ್ಷೇತ್ರಗಳು ಅಭಿವೃದ್ದಿ ಹೊಂದಿದಾಗ ಮಾನವರು ಕೂಡ ಅಭಿವೃದ್ದಿ ಪಥದಲ್ಲಿ ಸಾಗಲು ಸಾಧ್ಯ ಎಂದರು.

ಕಾರ್ಯಕ್ರದಲ್ಲಿ ಉದ್ಯಮಿ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು ಮತ್ತು ಎಡಪದವು ರಾಧಕೃಷ್ಣ ತಂತ್ರಿ ಆರ್ಶೀವಚನ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀಣೋದ್ದಾರ ಸಮಿತಿ ಅಧ್ಯಕ್ಷರು ಜಯಂತ್ ಶೆಟ್ಟಿ ವಹಿಸಿದ್ದರು.

ಆಡಳಿತ ಮೊಕ್ತೆಸರರು ಶ್ರೀ ದಯಾನಂದ ಹೆಜಮಾಡಿ , ಡಾ| ಎಚ್.ಟಿ ಮನೋರಮ ರಾವ್,ಸಂತೋಷ್ ಶೆಟ್ಟಿ ಪೂಣೆ,ವಾಸುದೇವ ಆರ್ ಕೋಟ್ಯಾನ್,ಸುಮನ್ ತಲವಾರ್ ಹೆಜಮಾಡಿ,ಶಶಿಕಾಂತ್ ಪಡುಬಿದ್ರಿ,ನೀತಾ ಗುರುರಾಜ್,ರೇಣುಕಾ ಪುತ್ರನ್,ವಿಶಾಲಕ್ಷಿ ಪುತ್ರನ್,ಪುರುಷೋತ್ತಮ ಗುರಿಕಾರ,ರತ್ನಾಕರ ಶೆಟ್ಟಿ,ಕೊಂಬೆಟ್ಟು ರಘುಪತಿ ರಾವ್,ಶಂಕರ್ ಶೆಟ್ಟಿ ,ಗೀತಾಂಜಲಿ ಸುವರ್ಣ,ಪುಷ್ಪರಾಜ್ ಎಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಸುಧಾಕರ ಕರ್ಕೇರ ಸ್ವಾಗತಿಸಿ, ಅರ್ಪಿತಾ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ,ಓಂದಾಸ್ ಹೆಜಮಾಡಿ ವಂದಿಸಿದರು.

ವರದಿ: ಪುರುಷೋತ್ತಮ ಸಾಲಿಯಾನ್,ವಿಶ್ವನ್ಯೂಸ್೨೪

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago