Featured

ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಮಗ್ರ ಜೀಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ.

ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಮಗ್ರ ಜೀಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ.

ಕಾಪು: ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಮಗ್ರ ಜೀಣೋದ್ಧಾರದ ಅಂಗವಾಗಿ ಆದಿತ್ಯವಾರ ದೇಗುಲದ ವಠಾರದಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಯನ್ನು ಉದ್ಯಮಿ ೨೦೧೯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ಕೆ ಪ್ರಕಾಶ್ ಶೆಟ್ಟಿ ನೆರವೇರಿಸಿದರು.ತದನಂತರ ಮಾತಾಡಿ ಈ ಐತಿಹಾಸಿಕ ದೇಗುಲ ನಿರ್ಮಾಣ ಕಾರ್ಯದಲ್ಲಿ ನನ್ನನ್ನು ಪಾಲುದಾರರನ್ನಾಗಿಸಿದ ದೇವರಿಗೆ ಹಾಗೂ ಕಮಿಟಿ ಸದಸ್ಯರಿಗೆ ವಂದನೆಗಳು, ತುಳುನಾಡಿನ ದೇವಸ್ಥಾನಗಳು ಜೀರ್ಣೋದ್ದಾರಗೊಂಡು ಮುಂದಿನ ಪೀಳಿಗೆಗೆ ಅದು ಕೊಡುಗೆಯಾಗಬೇಕು ಎಂದರು.ನೂತನ ದೇಗುಲದ ನೀಲನಕಾಶೆಯನ್ನು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ನೆರೆವೇರಿಸಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತಾಡಿ” ಹೆಜಮಾಡಿ ಉಡುಪಿ ಜಿಲ್ಲೆಯ ಹೆಬ್ಬಾಗಿಲು ಇಲ್ಲಿನ ದೇಗುಲ ನಿರ್ಮಾಣ ಆಗುವಂತಹ ಕಾರ್ಯ ಅತ್ಯಂತ ಸಂತಸ ಹಾಗೂ ಖುಷಿಯ ವಿಚಾರ, ಧಾರ್ಮಿಕ ಕ್ಷೇತ್ರಗಳು ಅಭಿವೃದ್ದಿ ಹೊಂದಿದಾಗ ಮಾನವರು ಕೂಡ ಅಭಿವೃದ್ದಿ ಪಥದಲ್ಲಿ ಸಾಗಲು ಸಾಧ್ಯ ಎಂದರು.

ಕಾರ್ಯಕ್ರದಲ್ಲಿ ಉದ್ಯಮಿ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು ಮತ್ತು ಎಡಪದವು ರಾಧಕೃಷ್ಣ ತಂತ್ರಿ ಆರ್ಶೀವಚನ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀಣೋದ್ದಾರ ಸಮಿತಿ ಅಧ್ಯಕ್ಷರು ಜಯಂತ್ ಶೆಟ್ಟಿ ವಹಿಸಿದ್ದರು.

ಆಡಳಿತ ಮೊಕ್ತೆಸರರು ಶ್ರೀ ದಯಾನಂದ ಹೆಜಮಾಡಿ , ಡಾ| ಎಚ್.ಟಿ ಮನೋರಮ ರಾವ್,ಸಂತೋಷ್ ಶೆಟ್ಟಿ ಪೂಣೆ,ವಾಸುದೇವ ಆರ್ ಕೋಟ್ಯಾನ್,ಸುಮನ್ ತಲವಾರ್ ಹೆಜಮಾಡಿ,ಶಶಿಕಾಂತ್ ಪಡುಬಿದ್ರಿ,ನೀತಾ ಗುರುರಾಜ್,ರೇಣುಕಾ ಪುತ್ರನ್,ವಿಶಾಲಕ್ಷಿ ಪುತ್ರನ್,ಪುರುಷೋತ್ತಮ ಗುರಿಕಾರ,ರತ್ನಾಕರ ಶೆಟ್ಟಿ,ಕೊಂಬೆಟ್ಟು ರಘುಪತಿ ರಾವ್,ಶಂಕರ್ ಶೆಟ್ಟಿ ,ಗೀತಾಂಜಲಿ ಸುವರ್ಣ,ಪುಷ್ಪರಾಜ್ ಎಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಸುಧಾಕರ ಕರ್ಕೇರ ಸ್ವಾಗತಿಸಿ, ಅರ್ಪಿತಾ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ,ಓಂದಾಸ್ ಹೆಜಮಾಡಿ ವಂದಿಸಿದರು.

ವರದಿ: ಪುರುಷೋತ್ತಮ ಸಾಲಿಯಾನ್,ವಿಶ್ವನ್ಯೂಸ್೨೪

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

25 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

42 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

55 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago