ಕಾಪು: ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಮಗ್ರ ಜೀಣೋದ್ಧಾರದ ಅಂಗವಾಗಿ ಆದಿತ್ಯವಾರ ದೇಗುಲದ ವಠಾರದಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಯನ್ನು ಉದ್ಯಮಿ ೨೦೧೯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ಕೆ ಪ್ರಕಾಶ್ ಶೆಟ್ಟಿ ನೆರವೇರಿಸಿದರು.ತದನಂತರ ಮಾತಾಡಿ ಈ ಐತಿಹಾಸಿಕ ದೇಗುಲ ನಿರ್ಮಾಣ ಕಾರ್ಯದಲ್ಲಿ ನನ್ನನ್ನು ಪಾಲುದಾರರನ್ನಾಗಿಸಿದ ದೇವರಿಗೆ ಹಾಗೂ ಕಮಿಟಿ ಸದಸ್ಯರಿಗೆ ವಂದನೆಗಳು, ತುಳುನಾಡಿನ ದೇವಸ್ಥಾನಗಳು ಜೀರ್ಣೋದ್ದಾರಗೊಂಡು ಮುಂದಿನ ಪೀಳಿಗೆಗೆ ಅದು ಕೊಡುಗೆಯಾಗಬೇಕು ಎಂದರು.ನೂತನ ದೇಗುಲದ ನೀಲನಕಾಶೆಯನ್ನು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ನೆರೆವೇರಿಸಿದರು.
ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತಾಡಿ” ಹೆಜಮಾಡಿ ಉಡುಪಿ ಜಿಲ್ಲೆಯ ಹೆಬ್ಬಾಗಿಲು ಇಲ್ಲಿನ ದೇಗುಲ ನಿರ್ಮಾಣ ಆಗುವಂತಹ ಕಾರ್ಯ ಅತ್ಯಂತ ಸಂತಸ ಹಾಗೂ ಖುಷಿಯ ವಿಚಾರ, ಧಾರ್ಮಿಕ ಕ್ಷೇತ್ರಗಳು ಅಭಿವೃದ್ದಿ ಹೊಂದಿದಾಗ ಮಾನವರು ಕೂಡ ಅಭಿವೃದ್ದಿ ಪಥದಲ್ಲಿ ಸಾಗಲು ಸಾಧ್ಯ ಎಂದರು.
ಕಾರ್ಯಕ್ರದಲ್ಲಿ ಉದ್ಯಮಿ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು ಮತ್ತು ಎಡಪದವು ರಾಧಕೃಷ್ಣ ತಂತ್ರಿ ಆರ್ಶೀವಚನ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀಣೋದ್ದಾರ ಸಮಿತಿ ಅಧ್ಯಕ್ಷರು ಜಯಂತ್ ಶೆಟ್ಟಿ ವಹಿಸಿದ್ದರು.
ಆಡಳಿತ ಮೊಕ್ತೆಸರರು ಶ್ರೀ ದಯಾನಂದ ಹೆಜಮಾಡಿ , ಡಾ| ಎಚ್.ಟಿ ಮನೋರಮ ರಾವ್,ಸಂತೋಷ್ ಶೆಟ್ಟಿ ಪೂಣೆ,ವಾಸುದೇವ ಆರ್ ಕೋಟ್ಯಾನ್,ಸುಮನ್ ತಲವಾರ್ ಹೆಜಮಾಡಿ,ಶಶಿಕಾಂತ್ ಪಡುಬಿದ್ರಿ,ನೀತಾ ಗುರುರಾಜ್,ರೇಣುಕಾ ಪುತ್ರನ್,ವಿಶಾಲಕ್ಷಿ ಪುತ್ರನ್,ಪುರುಷೋತ್ತಮ ಗುರಿಕಾರ,ರತ್ನಾಕರ ಶೆಟ್ಟಿ,ಕೊಂಬೆಟ್ಟು ರಘುಪತಿ ರಾವ್,ಶಂಕರ್ ಶೆಟ್ಟಿ ,ಗೀತಾಂಜಲಿ ಸುವರ್ಣ,ಪುಷ್ಪರಾಜ್ ಎಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಸುಧಾಕರ ಕರ್ಕೇರ ಸ್ವಾಗತಿಸಿ, ಅರ್ಪಿತಾ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ,ಓಂದಾಸ್ ಹೆಜಮಾಡಿ ವಂದಿಸಿದರು.
ವರದಿ: ಪುರುಷೋತ್ತಮ ಸಾಲಿಯಾನ್,ವಿಶ್ವನ್ಯೂಸ್೨೪
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…