desha

ಹೆಡಗೇವಾರ್ ಜನ್ಮ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ರಾಷ್ಟ್ರಪತಿ, ಡೈರಿಯಲ್ಲಿ ಅದ್ಭುತವಾದ ಸಂದೇಶ ಬರೆದ ಪ್ರಣಬ್ ಮುಖರ್ಜಿ..

ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆಯೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಕಚೇರಿ ಇರುವ ನಾಗ್ಪುರಕ್ಕೆ ಭೇಟಿ ನೀಡಿದ್ದಾರೆ. ಪ್ರತಿ ವರ್ಷ ನಡೆಯುವ ಸಂಘ ಶಿಕ್ಷಾ ವರ್ಗಕ್ಕೆ ಆರ್ ಎಸ್ ಎಸ್ ಗಣ್ಯ ನಾಯಕರನ್ನು ಆಹ್ವಾನಿಸುತ್ತದೆ. ಈ ಬಾರಿ ಆರ್ ಎಸ್ ಎಸ್ ಮಾಜಿ ರಾಷ್ಟ್ರಪತಿಗಳಾದ ಪ್ರಣವ್ ಮುಖರ್ಜಿ ಅವರನ್ನು ಆಹ್ವಾನಿಸಿತ್ತು. ಕಾಂಗ್ರೆಸ್ ವಲಯದಲ್ಲಿ ಈ ಸುದ್ದಿ ತೀವ್ರ ಸಂಚಲನವನ್ನು ಸೃಷ್ಟಿಸಿತ್ತು. ಪ್ರಣಬ್ ಮುಖರ್ಜಿಯವರು ಭಾಗವಹಿಸಿದಂತೆ ಭಾರಿ ಒತ್ತಡ ಹೇರುವ ತಂತ್ರವನ್ನು ಮಾಡಿತ್ತು. ಆದರೆ ಪ್ರಣಬ್ ಮುಖರ್ಜಿ ಅವರು ತಾನು ಭಾಗವಹಿಸಿಯೇ ತೀರುವುದಾಗಿ ಘೋಷಿಸಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾ ವರ್ಗವನ್ನು ಉದ್ದೇಶಿಸಿ ಭಾಷಣ ಮಾಡುವ ಮುನ್ನ ಆರ್ ಎಸ್ ಎಸ್‌ ನ ಸ್ಥಾಪಕರಾದ ಹೆಡಗೆವಾರ್ ಅವರ ಜನ್ಮಸ್ಥಳಕ್ಕೆ ಪ್ರಣಬ್ ಮುಖರ್ಜಿಯವರು ಭೇಟಿ ನೀಡಿದ್ದರು. ಹೆಡಗೆವಾರ್ ಅವರ ಜನ್ಮ ಸ್ಮಾರಕದಲ್ಲಿ ಸಂದರ್ಶಕರ ಪುಸ್ತಕದಲ್ಲಿ ಪ್ರಣವ್ ಮುಖರ್ಜಿ ಅವರು ಹೆಡಗೆವಾರ್ ಕುರಿತು ಅದ್ಭುತವಾದ ಸಂದೇಶವೊಂದನ್ನು ಬರೆದಿದ್ದಾರೆ. ‘ನಾನು ಇಂದು ಇಲ್ಲಿ ಭಾರತ ಮಾತೆಯ ಹೆಮ್ಮೆಯ ಪುತ್ರನೋರ್ವನಿಗೆ ನಮನ ಸಲ್ಲಿಸಲು ಬಂದಿದ್ದೇನೆ’ ಎಂಬ ಸಂದೇಶವನ್ನು ಸಂದರ್ಶಕರ ಡೈರಿಯಲ್ಲಿ ಪ್ರಣವ್ ಮುಖರ್ಜಿಯವರು ದಾಖಲಿಸಿದ್ದಾರೆ.  ಆರ್.ಎಸ್.ಎಸ್. ಸ್ಥಾಪಕರನ್ನು ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಎಂದು ಪ್ರಣಬ್ ಮುಖರ್ಜಿ ಯವರು ಬಣ್ಣಿಸಿದ್ದಾರೆ.

ನಾಗಪುರಕ್ಕೆ ಹೋಗಿ ಅಲ್ಲಿಯೇ ಎಲ್ಲ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ ಎಂದಿದ್ದರು ಪ್ರಣಬ್ ಮುಖರ್ಜಿ. ಪ್ರಣಬ್ ಮುಖರ್ಜಿ ಅವರು ಈಗ ಸಂದರ್ಶಕರ ಡೈರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಾದ ಹೆಡಗೇವಾರ್ ರನ್ನು ಹೊಗಳುವ ಮೂಲಕ ವಿರೋಧಿಗಳ ಬಾಯಿಯನ್ನು ಈಗಾಗಲೇ ಮುಚ್ಚಿಸಿದ್ದಾರೆ. ಇನ್ನು ಇಂದು ಸಂಜೆ ಆರ್ ಎಸ್ ಎಸ್ ಸಂಘ ಶಿಕ್ಷಾ ವರ್ಗದಲ್ಲಿ ಆರ್ ಎಸ್ ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲಿ ಇನ್ನು ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

24 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

24 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago