ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆಯೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಕಚೇರಿ ಇರುವ ನಾಗ್ಪುರಕ್ಕೆ ಭೇಟಿ ನೀಡಿದ್ದಾರೆ. ಪ್ರತಿ ವರ್ಷ ನಡೆಯುವ ಸಂಘ ಶಿಕ್ಷಾ ವರ್ಗಕ್ಕೆ ಆರ್ ಎಸ್ ಎಸ್ ಗಣ್ಯ ನಾಯಕರನ್ನು ಆಹ್ವಾನಿಸುತ್ತದೆ. ಈ ಬಾರಿ ಆರ್ ಎಸ್ ಎಸ್ ಮಾಜಿ ರಾಷ್ಟ್ರಪತಿಗಳಾದ ಪ್ರಣವ್ ಮುಖರ್ಜಿ ಅವರನ್ನು ಆಹ್ವಾನಿಸಿತ್ತು. ಕಾಂಗ್ರೆಸ್ ವಲಯದಲ್ಲಿ ಈ ಸುದ್ದಿ ತೀವ್ರ ಸಂಚಲನವನ್ನು ಸೃಷ್ಟಿಸಿತ್ತು. ಪ್ರಣಬ್ ಮುಖರ್ಜಿಯವರು ಭಾಗವಹಿಸಿದಂತೆ ಭಾರಿ ಒತ್ತಡ ಹೇರುವ ತಂತ್ರವನ್ನು ಮಾಡಿತ್ತು. ಆದರೆ ಪ್ರಣಬ್ ಮುಖರ್ಜಿ ಅವರು ತಾನು ಭಾಗವಹಿಸಿಯೇ ತೀರುವುದಾಗಿ ಘೋಷಿಸಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾ ವರ್ಗವನ್ನು ಉದ್ದೇಶಿಸಿ ಭಾಷಣ ಮಾಡುವ ಮುನ್ನ ಆರ್ ಎಸ್ ಎಸ್ ನ ಸ್ಥಾಪಕರಾದ ಹೆಡಗೆವಾರ್ ಅವರ ಜನ್ಮಸ್ಥಳಕ್ಕೆ ಪ್ರಣಬ್ ಮುಖರ್ಜಿಯವರು ಭೇಟಿ ನೀಡಿದ್ದರು. ಹೆಡಗೆವಾರ್ ಅವರ ಜನ್ಮ ಸ್ಮಾರಕದಲ್ಲಿ ಸಂದರ್ಶಕರ ಪುಸ್ತಕದಲ್ಲಿ ಪ್ರಣವ್ ಮುಖರ್ಜಿ ಅವರು ಹೆಡಗೆವಾರ್ ಕುರಿತು ಅದ್ಭುತವಾದ ಸಂದೇಶವೊಂದನ್ನು ಬರೆದಿದ್ದಾರೆ. ‘ನಾನು ಇಂದು ಇಲ್ಲಿ ಭಾರತ ಮಾತೆಯ ಹೆಮ್ಮೆಯ ಪುತ್ರನೋರ್ವನಿಗೆ ನಮನ ಸಲ್ಲಿಸಲು ಬಂದಿದ್ದೇನೆ’ ಎಂಬ ಸಂದೇಶವನ್ನು ಸಂದರ್ಶಕರ ಡೈರಿಯಲ್ಲಿ ಪ್ರಣವ್ ಮುಖರ್ಜಿಯವರು ದಾಖಲಿಸಿದ್ದಾರೆ. ಆರ್.ಎಸ್.ಎಸ್. ಸ್ಥಾಪಕರನ್ನು ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಎಂದು ಪ್ರಣಬ್ ಮುಖರ್ಜಿ ಯವರು ಬಣ್ಣಿಸಿದ್ದಾರೆ.
ನಾಗಪುರಕ್ಕೆ ಹೋಗಿ ಅಲ್ಲಿಯೇ ಎಲ್ಲ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ ಎಂದಿದ್ದರು ಪ್ರಣಬ್ ಮುಖರ್ಜಿ. ಪ್ರಣಬ್ ಮುಖರ್ಜಿ ಅವರು ಈಗ ಸಂದರ್ಶಕರ ಡೈರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಾದ ಹೆಡಗೇವಾರ್ ರನ್ನು ಹೊಗಳುವ ಮೂಲಕ ವಿರೋಧಿಗಳ ಬಾಯಿಯನ್ನು ಈಗಾಗಲೇ ಮುಚ್ಚಿಸಿದ್ದಾರೆ. ಇನ್ನು ಇಂದು ಸಂಜೆ ಆರ್ ಎಸ್ ಎಸ್ ಸಂಘ ಶಿಕ್ಷಾ ವರ್ಗದಲ್ಲಿ ಆರ್ ಎಸ್ ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲಿ ಇನ್ನು ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…