Featured

ಹೆಣ್ಣು ಮಕ್ಕಳು ಕೇವಲ ಆಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಾರ್ವಜನಿಕರ ರಕ್ಷಣೆಗೂ ಸಹ ಬದ್ದ ಎಂದು ನಿರೂಪಿಸಿದ್ದಾರೆ : ಅರಗ ಜ್ಞಾನೇಂದ್ರ – Vishwanews24

ಹೆಣ್ಣು ಮಕ್ಕಳು ಕೇವಲ ಆಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಾರ್ವಜನಿಕರ ರಕ್ಷಣೆಗೂ ಸಹ ಬದ್ದ ಎಂದು ನಿರೂಪಿಸಿದ್ದಾರೆ : ಅರಗ ಜ್ಞಾನೇಂದ್ರ – Vishwanews24

ಮೈಸೂರು: ಇತ್ತೀಚಿನ ದಿನಗಳಲ್ಲಿ ಹೆಣ್ಣು ಅಬಲೆಯಲ್ಲ ಹಾಗೂ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಮಾಜದ ರಕ್ಷಣೆಗೆ ಬದ್ದ ಎಂದು ನಿರೂಪಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಇಂದು ಮೈಸೂರಿನ, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ನಡೆದ, 45ನೇ ತಂಡದ ಆರಕ್ಷಕ ಉಪನಿರೀಕ್ಷಕರ (ಸಿವಿಲ್) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಹಳ ಜನ ಹೇಳುತ್ತಾರೆ ಪೊಲೀಸ್ ಠಾಣೆಗಳಿಗೆ ಮರ್ಯಾದಸ್ಥರು ಹೋಗವ ಸ್ಥಳವಲ್ಲ ಅಂತಾ. ಪೊಲೀಸ್‌ ಠಾಣೆಯಲ್ಲಿ ಇರುವವರು ಉನ್ನತ ಶಿಕ್ಷಣ ಪಡೆದುಕೊಂಡು ಬಂದಿರುತ್ತಾರೆ, ಅಲ್ಲದೆ ಶಿಕ್ಷಣ, ತರಬೇತಿ ಪಡೆದವರು ಯಾರಿಗೂ ಹಿಂಸೆ ಕೊಡುವುದಿಲ್ಲ ಎಂದರು.

ಇದನ್ನೂ ಓದಿ :

ಇನ್ನು ಈ ಬಾರಿ ಸುಮಾರು 228 ಪ್ರಶಿಕ್ಷಣಾರ್ಥಿಗಳು ಇಂದು ತರಬೇತಿ ಮುಗಿಸಿ ಸೇವೆಗೆ ಸಜ್ಜಾಗಿದ್ದು, ಅದರಲ್ಲೂ ಪುರುಷ ಪ್ರಶಿಕ್ಷಣಾರ್ಥಿಗಳಿಗೆ ಸರಿಸಾಟಿಯಾಗಿ 45 ಮಂದಿ ಮಹಿಳೆಯರು ತರಬೇತಿ ಮುಗಿಸಿ, ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದಾರೆ ಎಂದು ಅವರನ್ನು ಪ್ರಶಂಸಿಸಿದರು.

ಹೆಣ್ಣು ಮಕ್ಕಳು ಅಬಲೆಯಲ್ಲ ಹಾಗೂ ಕೇವಲ ಆಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಾರ್ವಜನಿಕರ ರಕ್ಷಣೆಗೂ ಸಹ ಆಕೆ ಬದ್ದ ಎಂದು ನಿರೂಪಿಸಿದ್ದಾರೆ ಎಂದರು.

ತರಬೇತಿ ಮುಗಿಸಿ ಸೇವೆಗೆ ತೆರಳುತ್ತಿರುವ ತಾವುಗಳು ಸಮಾಜವಿರೋಧಿ ಶಕ್ತಿಗಳಿಗೆ ಭಯ ಹುಟ್ಟಿಸಬೇಕು. ಅದೇ ಸಮಯದಲ್ಲಿ ಕಾನೂನು ಗೌರವಿಸುವ ನಾಗರಿಕರಿಗೆ ಅಭಯ ನೀಡುವ ಕೆಲಸ ಮಾಡಬೇಕು, ಕೆಲವು ಪೊಲೀಸರು ಅನಿಷ್ಟತನ ಮಾಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ನೀವು ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬೇಡಿ. ನೀವು ರಕ್ಷಕರಾಗಬೇಕೆ ಹೊರತು ಯಾರ ಗುಲಾಮರಾಗಬಾರದು ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago