ಮೈಸೂರು: ಇತ್ತೀಚಿನ ದಿನಗಳಲ್ಲಿ ಹೆಣ್ಣು ಅಬಲೆಯಲ್ಲ ಹಾಗೂ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಮಾಜದ ರಕ್ಷಣೆಗೆ ಬದ್ದ ಎಂದು ನಿರೂಪಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಇಂದು ಮೈಸೂರಿನ, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ನಡೆದ, 45ನೇ ತಂಡದ ಆರಕ್ಷಕ ಉಪನಿರೀಕ್ಷಕರ (ಸಿವಿಲ್) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಹಳ ಜನ ಹೇಳುತ್ತಾರೆ ಪೊಲೀಸ್ ಠಾಣೆಗಳಿಗೆ ಮರ್ಯಾದಸ್ಥರು ಹೋಗವ ಸ್ಥಳವಲ್ಲ ಅಂತಾ. ಪೊಲೀಸ್ ಠಾಣೆಯಲ್ಲಿ ಇರುವವರು ಉನ್ನತ ಶಿಕ್ಷಣ ಪಡೆದುಕೊಂಡು ಬಂದಿರುತ್ತಾರೆ, ಅಲ್ಲದೆ ಶಿಕ್ಷಣ, ತರಬೇತಿ ಪಡೆದವರು ಯಾರಿಗೂ ಹಿಂಸೆ ಕೊಡುವುದಿಲ್ಲ ಎಂದರು.
ಇದನ್ನೂ ಓದಿ :
ಇನ್ನು ಈ ಬಾರಿ ಸುಮಾರು 228 ಪ್ರಶಿಕ್ಷಣಾರ್ಥಿಗಳು ಇಂದು ತರಬೇತಿ ಮುಗಿಸಿ ಸೇವೆಗೆ ಸಜ್ಜಾಗಿದ್ದು, ಅದರಲ್ಲೂ ಪುರುಷ ಪ್ರಶಿಕ್ಷಣಾರ್ಥಿಗಳಿಗೆ ಸರಿಸಾಟಿಯಾಗಿ 45 ಮಂದಿ ಮಹಿಳೆಯರು ತರಬೇತಿ ಮುಗಿಸಿ, ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದಾರೆ ಎಂದು ಅವರನ್ನು ಪ್ರಶಂಸಿಸಿದರು.
ಹೆಣ್ಣು ಮಕ್ಕಳು ಅಬಲೆಯಲ್ಲ ಹಾಗೂ ಕೇವಲ ಆಡುಗೆ ಮನೆಗೆ ಮಾತ್ರ ಸೀಮಿತವಲ್ಲ, ಬದಲಾಗಿ ರಾಷ್ಟ್ರ ಮತ್ತು ಸಾರ್ವಜನಿಕರ ರಕ್ಷಣೆಗೂ ಸಹ ಆಕೆ ಬದ್ದ ಎಂದು ನಿರೂಪಿಸಿದ್ದಾರೆ ಎಂದರು.
ತರಬೇತಿ ಮುಗಿಸಿ ಸೇವೆಗೆ ತೆರಳುತ್ತಿರುವ ತಾವುಗಳು ಸಮಾಜವಿರೋಧಿ ಶಕ್ತಿಗಳಿಗೆ ಭಯ ಹುಟ್ಟಿಸಬೇಕು. ಅದೇ ಸಮಯದಲ್ಲಿ ಕಾನೂನು ಗೌರವಿಸುವ ನಾಗರಿಕರಿಗೆ ಅಭಯ ನೀಡುವ ಕೆಲಸ ಮಾಡಬೇಕು, ಕೆಲವು ಪೊಲೀಸರು ಅನಿಷ್ಟತನ ಮಾಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ನೀವು ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬೇಡಿ. ನೀವು ರಕ್ಷಕರಾಗಬೇಕೆ ಹೊರತು ಯಾರ ಗುಲಾಮರಾಗಬಾರದು ಎಂದು ಕಿವಿ ಮಾತು ಹೇಳಿದರು.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…