Featured

ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ ; ಫೆ. 7ರಂದು ಚಾಲನೆ : ಸಚಿವ ಕೋಟ – Vishwanews24

ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ ; ಫೆ. 7ರಂದು ಚಾಲನೆ : ಸಚಿವ ಕೋಟ – Vishwanews24

ಬೆಂಗಳೂರು: ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಕರ್ನಾಟಕ ಸರಕಾರ ‘ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ’ಯನ್ನು ಪರಿಚಯಿಸುತ್ತಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಅನುಷ್ಠಾನಗೊಳ್ಳುವ ಈ ಯೋಜನೆಗೆ ಫೆ. 7ರಂದು ಚಾಲನೆ ಸಿಗಲಿದೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರ ವಹಿಸಿದ ತಕ್ಷಣ, ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗಾಗಿ ಇಲಾಖಾ ಹಾಸ್ಟೆಲ್‌ಗಳಲ್ಲಿ ಕರಾಟೆ ತರಬೇತಿ ನೀಡುವ ಯೋಜನೆಯ ಕುರಿತು ಪ್ರಸ್ತಾವಿಸಿದ್ದರು. ಅದರಂತೆ ಈಗಾಗಲೇ ರಾಜ್ಯಾದ್ಯಂತ ಪ್ರಾಯೋಗಿಕವಾಗಿ 100 ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆ. 7ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಲಾಖೆಯಿಂದ ಸಮವಸ್ತ್ರ ವಿತರಣೆ:
ಈ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಲಾಖಾಧಿಕಾರಿಗಳ ಸಭೆ ನಡೆಸಿ, ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟ ಮತ್ತು ಜಿಲ್ಲಾ ಮಟ್ಟದಲ್ಲಿ ತಲಾ 100 ಮಕ್ಕಳು ಕಲೆಯನ್ನು ಪ್ರದರ್ಶಿಸಲಿದ್ದಾರೆ. ತರಬೇತಿ ಪಡೆಯುವ ಮಕ್ಕಳಿಗೆ ಇಲಾಖೆಯ ವತಿಯಿಂದ ಸಮವಸ್ತ್ರ ನೀಡಲು ಸಿದ್ಧತೆ ನಡೆಸಲಾಗಿದೆ. ಉತ್ತಮ ಗುಣಮಟ್ಟದ ಸಮವಸ್ತ್ರಗಳನ್ನು ವಿತರಿಸಲು ಸಚಿವರು ಸೂಚಿಸಿದ್ದಾರೆ.

ಇದನ್ನೂ ಓದಿ :

1700ಕ್ಕೂ ಅಧಿಕ ಸಂಸ್ಥೆಗಳಲ್ಲಿ ಜಾರಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 629 ಮೆಟ್ರಿಕ್ ನಂತರದ ಹಾಸ್ಟೆಲ್‌ಗಳ ಸುಮಾರು 50ಸಾವಿರ ಹೆಣ್ಣುಮಕ್ಕಳಿಗೆ ತರಬೇತಿ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ 257 ಹಾಸ್ಟೆಲ್‌ಗಳ 30ಸಾವಿರ ಹೆಣ್ಣುಮಕ್ಕಳು ಹಾಗೂ 818 ಕ್ರೈಸ್ ವಸತಿ ಶಾಲೆಗಳ 1.02 ಲಕ್ಷ ಹೆಣ್ಣುಮಕ್ಕಳು ತರಬೇತಿ ಪಡೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 1704 ಹಾಸ್ಟೆಲ್‌ಗಳು ಮತ್ತು ವಸತಿ ಶಾಲೆಗಳ 1.82 ಲಕ್ಷ ಹೆಣ್ಣು ಮಕ್ಕಳು ಈ ಯೋಜನೆಯಲ್ಲಿ ಆತ್ಮ ರಕ್ಷಣೆ ಕಲೆಯ ತರಬೇತಿ ಪಡೆಯುವ ಗುರಿ ಹೊಂದಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಹಿಳಾ ತರಬೇತುದಾರರ ನಿಯೋಜನೆ:
ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆಯ ತರಬೇತಿ ನೀಡಲು ಮಹಿಳಾ ತರಬೇತುದಾರರನ್ನೇ ನಿಯೋಜಿಸಲಾಗುತ್ತದೆ. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದ ಮಹಿಳಾ ತರಬೇತುದಾರರು ಮಕ್ಕಳನ್ನು ತರಬೇತುಗೊಳಿಸುತ್ತಾರೆ. ಈಗಾಗಲೇ 100 ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ತರಬೇತಿ ಪ್ರಾರಂಭಗೊಂಡಿದ್ದು, ಗೌರವ ಧನದ ಆಧಾರದಲ್ಲಿ ಸಾವಿರಕ್ಕೂ ಮಿಕ್ಕಿ ತರಬೇತುದಾರರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಯೋಜನೆ ಲಾಂಛನ ಬಿಡುಗಡೆ: ಸಚಿವ ಕೋಟ
ಈಗಾಗಲೇ ಪ್ರಾಯೋಗಿಕವಾಗಿ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆ ಜಾರಿಗೊಳಿಸಲಾಗಿದೆ. ನೂರರಷ್ಟು ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಈಗಾಗಲೇ ಕರಾಟೆ ತರಬೇತಿ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಇದನ್ನು ಅಧಿಕೃತವಾಗಿ ಉದ್ಘಾಟಿಸಿ, ಯೋಜನೆಯ ಲಾಂಛನ ಬಿಡುಗಡೆ ಮಾಡುತ್ತಾರೆ. ಹೆಣ್ಣು ಮಕ್ಕಳು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಈ ಆತ್ಮರಕ್ಷಣೆ ಕಲೆ ಪ್ರಯೋಜನಕಾರಿ ಎಂದು ಸಚಿವರು ಹೇಳಿದರು

ಇದನ್ನೂ ಓದಿ :

 

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

19 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

20 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

20 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

22 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

23 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

23 hours ago