Featured

ಹೆಣ್ಣು ಮಗು ಜನಿಸಿದ್ದಕ್ಕೆ ತಂದೆಯಿಂದ ಸಂಭ್ರಮ ; ಅದ್ಧೂರಿ ಮೆರವಣಿಗೆಗಳ ಮೂಲಕ ಮನೆಗೆ ಸ್ವಾಗತ

ಸೂರತ್: ಸೂರತ್ ಪುರಸಭೆ ವ್ಯಾಪ್ತಿಯ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿರುವ ರಾಕೇಶ್ ಅಲಿಯಾಸ್ ಗಿರೀಶ್ ಪಟೇಲ್ ಎಂಬವರ ಪತ್ನಿ 45 ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೀಯಾ ನಾಮಾಂಕಿತ ಹೆಣ್ಣುಮಗುವನ್ನು ಮನೆಯ ಮಹಾಲಕ್ಷ್ಮೀ ಎಂದು ಭಾವಿಸಿರುವ ರಾಕೇಶ್, ಸ್ನೇಹಿತರೊಬ್ಬರ ಸಾಲಂಕೃತ ಕಾರಿನಲ್ಲಿ ಶುಕ್ರವಾರ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆ ಮೂಲಕ ಮುದ್ದಿನ ಮಗಳನ್ನು ಮನೆ ತುಂಬಿಸಿಕೊಂಡಿದ್ದಾರೆ.

ಸಂಭ್ರಮಾಚರಣೆಯ ಭಾಗವಾಗಿ ಸೂರತ್‌ನಿಂದ 35 ಕಿ.ಮೀಟರ್ ದೂರದಲ್ಲಿರುವ ಡೆಹೆನ್ ಎಂಬ ಹಳ್ಳಿಯ ರಸ್ತೆಯಲ್ಲಿ 200 ಅಡಿ ಉದ್ದದ ರಂಗೋಲಿಯ ಸಿಂಗಾರವಿತ್ತು. ರಾಕೇಶ್ ಪತ್ನಿ ಧರ್ಮಿಷ್ಠಾ ಅವರು ತವರು ಮನೆಯಿಂದ ಪತಿಯ ಊರಿಗೆ ಆಗಮಿಸುತ್ತಿದ್ದಂತೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ವೇಳೆ ಅಲ್ಲಿಯ ಮಹಿಳೆಯರು ಗರ್ಬಾ ನೃತ್ಯ ಪ್ರದರ್ಶಿಸಿ ತಾಯಿ ಮಗುವನ್ನು ಸ್ವಾಗತಿಸಿದರು.

ಮನೆಗೆ ಆಗಮಿಸಿದ ಪುತ್ರಿಯನ್ನು ರಾಕೇಶ್ ಭಾವನಾತ್ಮಕವಾಗಿ ಎತ್ತಿ ಸಂಭ್ರಮಿಸಿದ್ದು, ಎಲ್ಲರನ್ನು ಸೆಳೆಯುವಂತಿತ್ತು.

ಹೀಯಾ ನನಗೆ ಮೊದಲ ಮಗಳಾಗಿ ಜನಿಸಿದ್ದಾಳೆ. ನಮ್ಮ ಮನೆಗೆ ಮಹಾಲಕ್ಷ್ಮೀ ಇದ್ದಂತೆ ನನ್ನ ಮಗಳು. ಆದ್ದರಿಂದ ನನ್ನ ಮಗಳನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಮನೆಗೆ ಸ್ವಾಗತ ಮಾಡಿಕೊಳ್ಳಲಾಗಿದೆ. ನಮ್ಮ ಸಮಾಜಕ್ಕೆ ಹೆಣ್ಣು ಮಗುವಿನ ಮಹತ್ವ ತಿಳಿಸುವ ಉದ್ದೇಶ ನನ್ನದು ಎಂದು ತಂದೆ ರಾಕೇಶ್ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago