ಬೆಂಗಳೂರು: ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, 10 ಕೆಜಿ ಅಕ್ಕಿ ಉಚಿತ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಹೆಣ್ಮಕ್ಕಳಿಗಾಗಿ ತಾಯಿ, ಮಗು ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹೆಣ್ಣು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ. ಮಕ್ಕಳಿಗೆ ಗ್ರಾಮೀಣ ಭಾಗದಲ್ಲೇ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಬೆಂಗಳೂರಿನಂತಹ ನಗರಗಳಿಗೆ ಬರೋದು ತಪ್ಪಿಸುತ್ತೇವೆ ಎಂದರು.
ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಮಿಸ್ಟರ್ ನಡ್ಡಾಜಿ, ಡೋಂಟ್ ತ್ರೆಟನ್ ಅಸ್, ಏನ್ ಹೆದರಿಸ್ತೀರಾ? ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ಇಂತಹ ಬ್ಲ್ಯಾಕ್ಮೇಲ್ಗೆ ಹೆದರಲ್ಲ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರವು ಈಗಾಗಲೇ ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, 10 ಕೆಜಿ ಅಕ್ಕಿ ಉಚಿತ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ ಗ್ಯಾರಂಟಿಗಳನ್ನು ಘೋಷಿಸಿದ್ದು, ಇದೀಗ ಹೆಣ್ಣು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…