Featured

ಹೆತ್ತವರಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ :  ಡಾ| ಯೋಗೀಶ್ ಆಚಾರ್ಯ – Vishwanews24

ಹೆತ್ತವರಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ :  ಡಾ| ಯೋಗೀಶ್ ಆಚಾರ್ಯ

“ಸಕಾಲದಲ್ಲಿ ಪೌಷ್ಠಿಕಾಂಶ ಆಹಾರ ಸೇವನೆ, ವಯಸ್ಸಿಗೆ ತಕ್ಕಂತೆ ನಿದ್ದೆ, ವಿರೋಧಾಭಾಸ ಮಾತುಗಳ ಬಗ್ಗೆ ಎಚ್ಚರಿಕೆ, ಪ್ರತಿದಿನ ಮನೆಯ ಮಕ್ಕಳೊಂದಿಗೆ ಇರಲು ನಿರ್ದಿಷ್ಠ ಸಮಯ ನಿಗದಿಪಡಿಸುವುದು, ಸಮಾಜದ ಇತರರೊಂದಿಗೆ ಸಕಾರಾತ್ಮಕ ವರ್ತನೆ, ಯಾವುದೇ ಕಾರಣಕ್ಕೂ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವಾಗ ಪಲಾಯನವಾದವಾಗದಂತೆ ನೋಡಿಕೊಳ್ಳುವುದು ಇವೇ ಮೊದಲಾದ ಉದಾತ್ತ ನಡವಳಿಕೆ ಗಳು ಹೆತ್ತವರಲ್ಲಿ ಮಾತ್ರವಲ್ಲ ತಮ್ಮ ಮಕ್ಕಳಲ್ಲೂ ಅದು ಅನುಕರಣೆಯಾಗುವಂತೆ ನೋಡಿಕೊಂಡಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ” ಎಂದು ಉಡುಪಿ ಕುತ್ಪಾಡಿಯ ಎಸ್ ಡಿ ಎಮ್ ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ| ಯೋಗೀಶ್ ಆಚಾರ್ಯ ಹೇಳಿದ್ದಾರೆ.
ಅವರು ಉದ್ಯಾವರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ೨೦೨೨-೨೩ನೇ ಸಾಲಿನ ಪ್ರಥಮ ವಾರ್ಷಿಕ ಮಹಾಸಭೆಯಲ್ಲಿ ಶಾಲಾ ವಿದ್ಯಾರ್ಥಿಗಳ ಹೆತ್ತವರನ್ನು ಉದ್ದೇಶಿಸಿ ಈ ಮಾತನ್ನು ಹೇಳಿದರು. ಬೆಳಿಗ್ಗೆ ನಡೆದ ಸಭೆಯ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ| ತ್ರಿವೇಣಿ ವೇಣುಗೋಪಾಲ್ ನಿರ್ವಹಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕ ವಿಕ್ರಂ ಆಚಾರ್ಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ ಗಣಪತಿ ಕಾರಂತ್ ಪ್ರಸ್ಥಾವನಾ ಮಾತುಗಳನ್ನಾಡಿದರು. ಶಾಲಾ ಸಂಚಾಲಕ ಶ್ರೀ ಸುರೇಶ್ ಶೆಣೈ, ಶಾಲಾ ಆಡಳಿತ ಮಂಡಳಿಯ ಸದಸ್ಯ ಶ್ರೀ ಕೃಷ್ಣಕುಮಾರ್ ರಾವ್ ಮಟ್ಟು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ಗಣೇಶ್ ಕುಮಾರ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ರಾಜೀವಿ ಉಮೇಶ್ ಕರ್ಕೇರಾ, ಕೋಶಾಧಿಕಾರಿ ಶ್ರೀಮತಿ ಅಶ್ವಿನಿ ದೇವೇಂದ್ರ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಕು| ಪ್ರಮೀಳಾ ವಂದನಾರ್ಪಣೆ ಮಾಡಿದರು.
Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 hour ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago