ಬೆಂಗಳೂರು: ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.
ಗೋವಾದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಹಾಕಿ ಬೆಂಗಳೂರಿಗೆ ಟ್ಯಾಕ್ಸಿಯಲ್ಲಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಸುಚನಾ ಸೇಠ್ ಳನ್ನು ನಿನ್ನೆ ಚಿತ್ರದುರ್ಗದ ಐಮಂಗಲ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದರು. ನಂತರ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ತಾನು ಹೆತ್ತ ಮಗುವನ್ನೇ ತನ್ನ ಕೈಯಾರೆ ಕೊಲ್ಲುವಂಥ ಕ್ರೂರ ನಿರ್ಧಾರವನ್ನು ಏಕೆ ಮಾಡಿದರು ಎಂದು ಸತ್ಯ ತಿಳಿಯಲು ಖಾಕಿಪಡೆ ಸುಚನಾರನ್ನು ತೀವ್ರ ವಿಚಾರಣೆ ಗೊಳಪಡಿಸುತ್ತಿದೆ.
ಇಂದು ಅಂತ್ಯಸಂಸ್ಕಾರ: ಮಗುವಿನ ಮೃತದೇಹ ಬೆಂಗಳೂರಿನಲ್ಲಿ ಸುಚನಾ ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ಗೆ ಕರೆತರಲಾಗುತ್ತಿದ್ದು ಬಳಿಕ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ. ಮಗುವಿನ ತಂದೆ ವೆಂಕಟ ರಾಮನ್ ಇಂಡೋನೇಷಿಯಾದಿಂದ ಚಿತ್ರದುರ್ಗಕ್ಕೆ ಬಂದು ಪೊಲೀಸರೊಂದಿಗೆ ವಿಚಾರಣೆಗೆ ಸಹಕರಿಸಿದ್ದು ಇಂದು ಬೆಂಗಳೂರಿನಲ್ಲಿ ಮಗುವಿನ ಅಂತ್ಯಸಂಸ್ಕಾರ ನಡೆಸಲಿದ್ದಾರೆ.
6 ದಿನ ಪೊಲೀಸ್ ಕಸ್ಟಡಿಗೆ: ಸುಚನಾರ ಹಿನ್ನೆಲೆ, ಪತಿ ವೆಂಕಟರಮಣ ಜೊತೆ ಇದ್ದ ಸಂಬಂಧ, ಕುಟುಂಬ ಹಾಗೂ ಮಗುವಿನ ಹತ್ಯೆಗೆ ವಿಚಾರಣೆಗೊಳಪಡಿಸಲು ಸುಚನಾಳನ್ನು ಗೋವಾ ಪೊಲೀಸರು 6 ದಿನ ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಪತಿ ವೆಂಕಟರಮಣರನ್ನು ಸಹ ಕರೆಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…