Featured

ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗ ಕಂಪನಿ ಜನರಿಗೆ ಮೋಸ ಮಾಡುವಲ್ಲಿ ಶಾಮೀಲು: ದೇವಿಪ್ರಸಾದ್ ಶೆಟ್ಟಿ

ಕಾಪು: ಹೆಜಮಾಡಿ ಮತ್ತು ಸಾಸ್ತನ ಟೋಲ್ ಗೇಟ್ ಸಂಬಂಧ ಪಟ್ಟ ವಿಚಾರವಾಗಿ ಇಂದು ಪಡುಬಿದ್ರಿಯ ಖಾಸಾಗಿ ಹೋಟೆಲ್ ನಲ್ಲಿ ಉಭಯ ಜಿಲ್ಲಾ ಟೋಲ್ ಹೋರಾಟ ಸಮಿತಿಯ ಪತ್ರಿಕಾಗೋಷ್ಟಿ ನಡೆಯಿತು.
ಗೋಷ್ಟಿಯಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತಾಡಿ” 2010 ರ ಮೂಲ ನಕಾಶೆಯಲ್ಲಿರುವ ಪ್ರಕಾರ ಯಾವುದೇ ರೀತಿಯ ಕಾಮಗಾರಿ ನಡೆಯದೆ ಬಂಡವಾಳಶಾಹಿಗಳ ಕುಮ್ಮಕ್ಕಿಗೆ ಅನುಗುಣವಾಗಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ, ಸರಿಯಾದ ಸರ್ವೀಸ್ ರಸ್ತೆಯೂ ನಿರ್ಮಾಣವಾಗದೇ ವಾಹನ ಸವಾರರಿಗೆ ಸಂಚಾರಕ್ಕೆ ಭಾರಿ ತೊಂದರೆಯಾಗುತ್ತಿದೆ ಹಾಗೂ ದಾರಿ ದೀಪದ ನಿರ್ವಹಣೆಯಾಗುತ್ತಿಲ್ಲ, ನವಯುಗ ಕಂಪೆನಿ ನಿರ್ಮಿಸಿರುವ ಬಸ್ಸು ನಿಲ್ದಾಣಗಳು ಗುಜರಿ ಅಂಗಡಿ ಸೇರಿದೆ ಮತ್ತು ಹೆದ್ದಾರಿ ಕಾಮಗಾರಿ ಪೂರ್ಣವಾಗದೆ ಯಾವುದೇ ರೀತಿಯಲ್ಲಿ ನಾವೂ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಒಂದು ವೇಳೆ ಜಿಲ್ಲಾಡಳಿತ ಹಾಗೂ ಹೆದ್ದಾರಿ ಪ್ರಾಧಿಕಾರ ಪ್ರಜಾಪ್ರಭುತ್ವ ಕಡೆಗಣಿಸಿ ನವಯುಗ ಕಂಪೆನಿಯೊಂದಿಗೆ ಶಾಮೀಲಾದರೆ ಮುಂದಿನ ದಿನ ಉಭಯ ಜಿಲ್ಲೆಗಳಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದು.

ಸ್ಥಳೀಯ ವಾಹನಗಳಿಗೆ ಯಾವುದೇ ರೀತಿಯ ಟೋಲ್ ಸಂಗ್ರಹಿಸಲು ಬಿಡುವುದಿಲ್ಲ ಸೆ.30ರ ವರೆಗಿನ ಗಡುವು ನೀಡಿದೆ ಮತ್ತು ಸ್ಥಳೀಯ ವಾಹನಗಳ ಸಂಚಾರಕ್ಕೆ ಸರಿಯಾದ ಸರ್ವೀಸ್ ರಸ್ತೆ ನಿರ್ಮಿಸಲಿ ಎಂದರು.
ಮುಂದಿನ ದಿನಗಳಲ್ಲಿ ನಮ್ಮ ಹೆದ್ದಾರಿಯಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದರೇ ಆ ಜಾಗಕ್ಕೆ ನಮ್ಮ ಕಮಿಟಿಯ ಸದಸ್ಯರು ಅಥವಾ ಸಮಾಜಸೇವಕರು ,ನಾಗರಿಕರು ಭೇಟಿ ನೀಡಿ ನವಯುಗ ಕಂಪೆನಿಯ ವಿರುದ್ಧ ಕೂಡ ದೂರು ದಾಖಲಿಸಲಾಗುವುದು ಎಂದು ಹೇಳಿದರು.

ಕಾಪು ದಿವಾಕರ್ ಶೆಟ್ಟಿ ಮಾತಾಡಿ” ಹೆದ್ದಾರಿ ಪ್ರಾಧಿಕಾರ ಜನರನ್ನ ಕತ್ತಲೆಯಲ್ಲಿಟ್ಟು ನವಯುಗ ಕಂಪೆನಿಗೆ ಬೆಂಬಲ ನೀಡುತ್ತಿದೆ ಇದು ಪ್ರಜಾಪ್ರಭುತ್ವ ಕಗ್ಗೊಲೆ, ಕುಂದಾಪುರದಿಂದ ಮಂಗಳೂರು ಸಂಚಾರಕ್ಕೆ ಮೂರು ಕಡೆ ಟೋಲ್ ನೀಡುವುದಾದರು ಯಾವ ನ್ಯಾಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ದಿನನಿತ್ಯ ಜನ ತೊಂದರೆಯಾಗುತ್ತಿದೆ ಅದರ ಮಧ್ಯೆ ಟೋಲ್ ಸಂಗ್ರಹ ಖಂಡನಾರ್ಹ ಎಂದರು.

ಪ್ಲಾನ್ ನಡೆಸದೆ ಹೆಜಮಾಡಿಯಲ್ಲಿ ಟೋಲ್ ಗೇಟ್ ನಿರ್ಮಿಸಿದೆ 250 ಮೀಟರ್ ದೂರದಲ್ಲಿ ಮತ್ತೊಂದು ಟೋಲ್ ಗೂಡು ನಿರ್ಮಿಸಿ ಮೂರ್ಖತನ ಪ್ರದರ್ಶಿಸಿದ ಕಂಪೆನಿ ಇನ್ನು ಹೆದ್ದಾರಿ ಕಾಮಗಾರಿ ವೈಜ್ಞಾನಿಕವಾಗಿ ನಡೆಸಲು ಹೇಗೆ ಸಾದ್ಯವೆಂದು ಪಡುಬಿದ್ರಿ ನವೀನ್ಚಂದ್ರ ಶೆಟ್ಟಿ ಲೇವಡಿ ಮಾಡಿದರು.

ಪಾದೆಬೆಟ್ಟು ಪ್ರಕಾಶ್ ಶೆಟ್ಟಿ, ಮಿಥುನ್ ಹೆಗ್ಡೆ,ಗುಲಾಮ್ ಅಹಮ್ಮದ್, ಮಧುಚಂದ್ರ ಆಚಾರ್ಯ ಸೇರಿದಂತೆ ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago