Featured

ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ  ಕೇಂದ್ರ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರ ತಂಡ – vishwanews24

ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ  ಕೇಂದ್ರ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರ ತಂಡ

ಉಡುಪಿ/ ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಸಂಸದ ಕೋಟ ಹಾಗೂ ಚೌಟ ನೇತೃತ್ವದ ತಂಡ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು.

ಕರಾವಳಿ ಜಿಲ್ಲೆಯ ಜನಜೀವನದ ಜೀವನಾಡಿ ರಾಷ್ಟ್ರೀಯ ಹೆದ್ದಾರಿ 66 ರ ಮೂಲ ಡಿಸೈನ್ ನಲ್ಲಿ ಆಗಿರುವ ಲೋಪದೋಷಗಳಿಂದ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಮಂಗಳೂರಿನ ನಂತೂರು ಜಂಕ್ಷನ್ ಸೇರಿದಂತೆ ಉಡುಪಿಯ ಅಂಬಲಪಾಡಿಯ ಮೇಲ್ಸೇತುವೆ ಕಟಪಾಡಿ, ಬ್ರಹ್ಮಾವರದ ಆಕಾಶವಾಣಿಯ ತಿರುವಿನ ಅಂಡರ್ ಪಾಸ್ ನ ಸಮಸ್ಯೆ ಇವುಗಳೆಲ್ಲದರ ಪೂರ್ಣ ಅಧ್ಯಯನ ಮತ್ತು ಪರಿಹಾರಕ್ಕಾಗಿ ಉನ್ನತ ಮಟ್ಟದ ತಜ್ಞ ಇಂಜಿನಿಯರ್ ಗಳ ಸಮಿತಿಯೊಂದನ್ನು ರಚಿಸಿ NH. 66 ರ ಬಗ್ಗೆ ಅಧ್ಯಯನ ನಡೆಸಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಚಹರೆಗಳನ್ನು ಪುನರ್ ನಿರ್ಮಿಸಬೇಕೆಂದು ಚರ್ಚೆ ನಡೆಸಿದರು.

 

ಅಫಘಾತಗಳು ಸೇರಿದಂತೆ ವಾಹನ ಒತ್ತಡಗಳ ಸ್ಥಳವನ್ನು ಪರಿಶೀಲಿಸಿ ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ವರದಿ ಸಲ್ಲಿಸುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸಚಿವ ನಿತಿನ್ ಗಡ್ಕರಿ ಆದೇಶ ನೀಡಿದರು.

ಬ್ರಹ್ಮಾವರ, ಕೋಟ, ಕುಂದಾಪುರ ರಸ್ತೆ ದುರಸ್ತಿಯ ಬಗ್ಗೆಯೂ ಸಚಿವರ ಗಮನಕ್ಕೆ ತರಲಾಯಿತು. ಕಲ್ಯಾಣಪುರ – ಸಂತೆಕಟ್ಟೆ ಮತ್ತು ಮಣಿಪಾಲದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಚುರುಕಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ಮತ್ತು ಕರಾವಳಿ ರಸ್ತೆಗಳ ಸುಧಾರಣೆಗಾಗಿ (CRF) ಸೆಂಟ್ರಲ್ ರೋಡ್ ಫಂಡ್ ನಿಂದ ರಾಜ್ಯಕ್ಕೆ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ಸಂಸದ ಕೋಟ ಮತ್ತು ಚೌಟರೊಂದಿಗೆ ಲೋಕಸಭಾ ಸದಸ್ಯರಾದ ಬೆಂಗಳೂರು ಗ್ರಾಮಾಂತರ ಸಂಸದ ಶ್ರೀ ಮಂಜುನಾಥ ಕೋಲಾರ ಸಂಸದ ಮಲ್ಲೇಶ್ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಉದ್ಯಮಿ ಜಿ ಶಂಕರ್ ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಮುಂತಾದವರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 minutes ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

28 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

37 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

53 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

1 hour ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago