Featured

ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ  ಕೇಂದ್ರ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರ ತಂಡ – vishwanews24

ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ  ಕೇಂದ್ರ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರ ತಂಡ

ಉಡುಪಿ/ ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಸಂಸದ ಕೋಟ ಹಾಗೂ ಚೌಟ ನೇತೃತ್ವದ ತಂಡ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು.

ಕರಾವಳಿ ಜಿಲ್ಲೆಯ ಜನಜೀವನದ ಜೀವನಾಡಿ ರಾಷ್ಟ್ರೀಯ ಹೆದ್ದಾರಿ 66 ರ ಮೂಲ ಡಿಸೈನ್ ನಲ್ಲಿ ಆಗಿರುವ ಲೋಪದೋಷಗಳಿಂದ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಮಂಗಳೂರಿನ ನಂತೂರು ಜಂಕ್ಷನ್ ಸೇರಿದಂತೆ ಉಡುಪಿಯ ಅಂಬಲಪಾಡಿಯ ಮೇಲ್ಸೇತುವೆ ಕಟಪಾಡಿ, ಬ್ರಹ್ಮಾವರದ ಆಕಾಶವಾಣಿಯ ತಿರುವಿನ ಅಂಡರ್ ಪಾಸ್ ನ ಸಮಸ್ಯೆ ಇವುಗಳೆಲ್ಲದರ ಪೂರ್ಣ ಅಧ್ಯಯನ ಮತ್ತು ಪರಿಹಾರಕ್ಕಾಗಿ ಉನ್ನತ ಮಟ್ಟದ ತಜ್ಞ ಇಂಜಿನಿಯರ್ ಗಳ ಸಮಿತಿಯೊಂದನ್ನು ರಚಿಸಿ NH. 66 ರ ಬಗ್ಗೆ ಅಧ್ಯಯನ ನಡೆಸಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಚಹರೆಗಳನ್ನು ಪುನರ್ ನಿರ್ಮಿಸಬೇಕೆಂದು ಚರ್ಚೆ ನಡೆಸಿದರು.

 

ಅಫಘಾತಗಳು ಸೇರಿದಂತೆ ವಾಹನ ಒತ್ತಡಗಳ ಸ್ಥಳವನ್ನು ಪರಿಶೀಲಿಸಿ ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ವರದಿ ಸಲ್ಲಿಸುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸಚಿವ ನಿತಿನ್ ಗಡ್ಕರಿ ಆದೇಶ ನೀಡಿದರು.

ಬ್ರಹ್ಮಾವರ, ಕೋಟ, ಕುಂದಾಪುರ ರಸ್ತೆ ದುರಸ್ತಿಯ ಬಗ್ಗೆಯೂ ಸಚಿವರ ಗಮನಕ್ಕೆ ತರಲಾಯಿತು. ಕಲ್ಯಾಣಪುರ – ಸಂತೆಕಟ್ಟೆ ಮತ್ತು ಮಣಿಪಾಲದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಚುರುಕಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ಮತ್ತು ಕರಾವಳಿ ರಸ್ತೆಗಳ ಸುಧಾರಣೆಗಾಗಿ (CRF) ಸೆಂಟ್ರಲ್ ರೋಡ್ ಫಂಡ್ ನಿಂದ ರಾಜ್ಯಕ್ಕೆ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ಸಂಸದ ಕೋಟ ಮತ್ತು ಚೌಟರೊಂದಿಗೆ ಲೋಕಸಭಾ ಸದಸ್ಯರಾದ ಬೆಂಗಳೂರು ಗ್ರಾಮಾಂತರ ಸಂಸದ ಶ್ರೀ ಮಂಜುನಾಥ ಕೋಲಾರ ಸಂಸದ ಮಲ್ಲೇಶ್ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಉದ್ಯಮಿ ಜಿ ಶಂಕರ್ ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಮುಂತಾದವರಿದ್ದರು.

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

6 minutes ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

16 minutes ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

24 minutes ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

38 minutes ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

4 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

4 hours ago