Featured

ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ  ಕೇಂದ್ರ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರ ತಂಡ – vishwanews24

ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ  ಕೇಂದ್ರ ಸಚಿವರನ್ನು ಭೇಟಿಯಾದ ಕರಾವಳಿ ಸಂಸದರ ತಂಡ

ಉಡುಪಿ/ ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಸಂಸದ ಕೋಟ ಹಾಗೂ ಚೌಟ ನೇತೃತ್ವದ ತಂಡ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು.

ಕರಾವಳಿ ಜಿಲ್ಲೆಯ ಜನಜೀವನದ ಜೀವನಾಡಿ ರಾಷ್ಟ್ರೀಯ ಹೆದ್ದಾರಿ 66 ರ ಮೂಲ ಡಿಸೈನ್ ನಲ್ಲಿ ಆಗಿರುವ ಲೋಪದೋಷಗಳಿಂದ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಮಂಗಳೂರಿನ ನಂತೂರು ಜಂಕ್ಷನ್ ಸೇರಿದಂತೆ ಉಡುಪಿಯ ಅಂಬಲಪಾಡಿಯ ಮೇಲ್ಸೇತುವೆ ಕಟಪಾಡಿ, ಬ್ರಹ್ಮಾವರದ ಆಕಾಶವಾಣಿಯ ತಿರುವಿನ ಅಂಡರ್ ಪಾಸ್ ನ ಸಮಸ್ಯೆ ಇವುಗಳೆಲ್ಲದರ ಪೂರ್ಣ ಅಧ್ಯಯನ ಮತ್ತು ಪರಿಹಾರಕ್ಕಾಗಿ ಉನ್ನತ ಮಟ್ಟದ ತಜ್ಞ ಇಂಜಿನಿಯರ್ ಗಳ ಸಮಿತಿಯೊಂದನ್ನು ರಚಿಸಿ NH. 66 ರ ಬಗ್ಗೆ ಅಧ್ಯಯನ ನಡೆಸಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಚಹರೆಗಳನ್ನು ಪುನರ್ ನಿರ್ಮಿಸಬೇಕೆಂದು ಚರ್ಚೆ ನಡೆಸಿದರು.

 

ಅಫಘಾತಗಳು ಸೇರಿದಂತೆ ವಾಹನ ಒತ್ತಡಗಳ ಸ್ಥಳವನ್ನು ಪರಿಶೀಲಿಸಿ ಸಂಪೂರ್ಣ ವಿಡಿಯೋ ರೆಕಾರ್ಡ್ ಮಾಡಿ ವರದಿ ಸಲ್ಲಿಸುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸಚಿವ ನಿತಿನ್ ಗಡ್ಕರಿ ಆದೇಶ ನೀಡಿದರು.

ಬ್ರಹ್ಮಾವರ, ಕೋಟ, ಕುಂದಾಪುರ ರಸ್ತೆ ದುರಸ್ತಿಯ ಬಗ್ಗೆಯೂ ಸಚಿವರ ಗಮನಕ್ಕೆ ತರಲಾಯಿತು. ಕಲ್ಯಾಣಪುರ – ಸಂತೆಕಟ್ಟೆ ಮತ್ತು ಮಣಿಪಾಲದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಚುರುಕಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ಮತ್ತು ಕರಾವಳಿ ರಸ್ತೆಗಳ ಸುಧಾರಣೆಗಾಗಿ (CRF) ಸೆಂಟ್ರಲ್ ರೋಡ್ ಫಂಡ್ ನಿಂದ ರಾಜ್ಯಕ್ಕೆ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ಸಂಸದ ಕೋಟ ಮತ್ತು ಚೌಟರೊಂದಿಗೆ ಲೋಕಸಭಾ ಸದಸ್ಯರಾದ ಬೆಂಗಳೂರು ಗ್ರಾಮಾಂತರ ಸಂಸದ ಶ್ರೀ ಮಂಜುನಾಥ ಕೋಲಾರ ಸಂಸದ ಮಲ್ಲೇಶ್ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಉದ್ಯಮಿ ಜಿ ಶಂಕರ್ ಬಿಜೆಪಿ ಮುಖಂಡರಾದ ಸುರೇಶ್ ನಾಯಕ್ ಮುಂತಾದವರಿದ್ದರು.

Vishwa News 24

Recent Posts

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

16 minutes ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

37 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

54 minutes ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

1 hour ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

1 hour ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

1 hour ago