ಬೆಳಗಾವಿ : ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ.
ಅಂಬೇಡ್ಕರ್ ಕುರಿತ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ, ಈ ವಿಷಯದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ನ ಎಲ್ಲ ಸದಸ್ಯರು ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಈ ವೇಳೆ ಆಡಳಿತ ಮತ್ತು ವಿಕಪಕ್ಷ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ ನಡೆದಿದೆ. ಇದರಿಂದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಮುಂದೂಡಿದರು.
ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಸದನದಲ್ಲಿ ಮಾತಿನ ಚಕಮಕಿ ನಡೆಯಿತು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗೆ ದೂರು ನೀಡಿದರು. ದೂರು ಸ್ವೀಕರಿಸಿದ ಸಭಾಪತಿ, ಆಡಿಯೊ ವಿಡಿಯೋ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…