ಬೆಳಗಾವಿ : ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ.
ಅಂಬೇಡ್ಕರ್ ಕುರಿತ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ, ಈ ವಿಷಯದ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ನ ಎಲ್ಲ ಸದಸ್ಯರು ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ಪಟ್ಟು ಹಿಡಿದರು. ಈ ವೇಳೆ ಆಡಳಿತ ಮತ್ತು ವಿಕಪಕ್ಷ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ ನಡೆದಿದೆ. ಇದರಿಂದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಮುಂದೂಡಿದರು.
ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಸದನದಲ್ಲಿ ಮಾತಿನ ಚಕಮಕಿ ನಡೆಯಿತು. ಈ ಗದ್ದಲದ ಮಧ್ಯೆ ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗೆ ದೂರು ನೀಡಿದರು. ದೂರು ಸ್ವೀಕರಿಸಿದ ಸಭಾಪತಿ, ಆಡಿಯೊ ವಿಡಿಯೋ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…