ಹೆಬ್ರಿ : ಜು. 30 ರಂದು ಹಿರಿಯಡ್ಕದ ಪಡ್ಡಂ ಕಾರ್ನಿಕದ ಬಬ್ಬು ದೈವಸ್ಥಾನವನ್ನು ಹೊಕ್ಕ ಕಳ್ಳರು, ದೈವದ ಪ್ರಮುಖ ವಿಗ್ರಹವನ್ನು ಕದಿಯಲು ಆಗದೆ ಕೊನೆಗೆ ಹೊರಗೆ ಇರುವ ಕೊರಗಜ್ಜ ದೈವದ ಪಂಚಲೋಹದ ವಿಗ್ರಹವನ್ನು ಹಾಗೂ ಗಂಟೆ ಮಣಿಯನ್ನು ಕಳ್ಳತನ ಮಾಡಿದ್ದರು.
ಇನ್ನು ದೈವಸ್ಥಾನದಲ್ಲಿರುವ ದೈವದ ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ಹಿಂದಿನ ದಿನವಷ್ಟೇ ತೆಗೆದಿದ್ದ ಕಾರಣ ಕಳ್ಳರು ಕಾಣಿಕೆ ಡಬ್ಬಿ ಒಡೆದರೂ ಅವರಿಗೆ ಅಲ್ಲಿಯೂ ಎನೂ ಸಿಕ್ಕಿರಲಿಲ್ಲ. ಕಳ್ಳತನವಾದ ಬಗ್ಗೆ ದೈವಸ್ಥಾನ ಆಡಳಿತ ಮಂಡಳಿ ಹಾಗೂ ಊರಿನವರು ಹುಡುಕಾಡಿ ಸುತ್ತಮುತ್ತ ಹುಡುಕಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬಳಿಕ ಊರಿನವರು ಎಲ್ಲರೂ ಒಟ್ಟಾಗಿ ಸೇರಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಪ್ರಾರ್ಥನೆ ಸಲ್ಲಿಸಿದ ಮರುದಿನವೇ ದೈವಸ್ಥಾನದ ಎಡಭಾಗದಲ್ಲಿ ಕದ್ದ ಸೊತ್ತುಗಳಾದ ಗಂಟೆಮಣಿ ಹಾಗೂ ಕೊರಗಜ್ಜ ದೈವದ ಪಂಚಲೋಹ ವಿಗ್ರಹ ಪತ್ತೆಯಾಗಿದ್ದು ಎಲ್ಲರನ್ನು ಅಚ್ಚರಿಗೀಡು ಮಾಡಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…