ಹೆಬ್ರಿ: ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಿವಪುರ ಗ್ರಾಮದ ರಾಂಪುರ ಎನ್ನುವಲ್ಲಿ ಜ. 4ರ ರಾತ್ರಿ ಸುಮಾರು 11.30ರ ಹೊತ್ತಿಗೆ ಸಂಭವಿಸಿದೆ.
ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25) ಮೃತ ದುರ್ದೈವಿ.
ಹೆಬ್ರಿ ಕಡೆ ಬರುತ್ತಿದ್ದ ರಾಹುಲ್ ಚಲಾಯಿಸುತ್ತಿದ್ದ ಬೈಕ್ಗೆ ಎದುರುಗಡೆಯಿಂದ ಬಂದ ಸ್ವಿಪ್ಟ್ ಕಾರಿನ ಚಾಲಕ ಅರುಣ್ ಅತೀ ವೇಗವಾಗಿ ಮತ್ತು ಅಜಾರೂಕತೆಯಿಂದ ರಸ್ತೆಯ ತೀರ ಬಲಭಾಗಕ್ಕೆ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಮೋಟಾರ್ ಸೈಕಲ್ ಸವಾರ ರಸ್ತೆಗೆ ಬಿದ್ದಿದ್ದು, ಅವರಿಗೆ ತೀವ್ರ ಸ್ವರೂಪದ ಗಾಯವಾಗಿತ್ತು.
ರಾಹುಲ್ ಅವರನ್ನು ಸುರೇಶ ಅವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಫಲಕಾರಿಯಾಗಲಿಲ್ಲ. ಜ. 4ರ ರಾತ್ರಿ ಮುಳ್ಳುಗುಡ್ಡೆ ಶಾಲೆಯಲ್ಲಿ ನಡೆದ ನಾಟಕವನ್ನು ನೋಡಿ ಮನೆಗೆ ಹೋಗುತ್ತಿದ್ದ ಸಂದರ್ಭ ಅಪಘಾತ ನಡೆದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…