ಹೆಬ್ರಿ: ಪ್ರಯಾಣಿಕ ಯುವತಿಯೊಬ್ಬಳು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿನಡೆದಿದೆ.
ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ಮೇಗರವಳ್ಳಿಯಲ್ಲಿ ಸುರಕ್ಷಾ ಎಂಬವರು ಏರಿದ್ದರು. ಆಗುಂಬೆ ಘಾಟಿ ತಲುಪುವಷ್ಟರಲ್ಲಿ ಸುರಕ್ಷಾ ತೀವ್ರ ಅಸ್ವಸ್ಥಗೊಂಡರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕ ವಾಸಿಮ್ ದೇಸಾಯಿ ಸಹಾಯಕ್ಕೆ ಧಾವಿಸಿದ್ದು, ಚಾಲಕ ತಾರೇಶ್ ಬಸ್ಸನ್ನು ನೇರವಾಗಿ ಸೋಮೇಶ್ವರದ ಉಪ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕೊಂಡೊಯ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದರೂ ಸುರಕ್ಷಾರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿಲ್ಲಿ. ಈ ಹಿನ್ನೆಲೆಯಲ್ಲಿ ಆಕೆಯನ್ನು ಬಸ್ ಸಿಬ್ಬಂದಿ ಅಲ್ಲಿಂದ ನೇರವಾಗಿ ಪ್ರಯಾಣಿಕರ ಸಹಕಾರದೊಂದಿಗೆ ಹೆಬ್ರಿಗೆ ಕರೆತಂದಿದ್ದಾರೆ. ಈ ವೇಳೆ ಹೆಬ್ರಿ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಪೊಲೀಸರು ಸೋಮೇಶ್ವರ ದಿಂದ ಹೆಬ್ರಿಯ ಆಸ್ಪತ್ರೆಯ ತನಕ ಟ್ರಾಫಿಕ್ ಸಮಸ್ಯೆ ಆಗದಂತೆ ಸಹಕರಿಸಿದ್ದಾರೆ. ಸುರಕ್ಷಾರನ್ನು ಹೆಬ್ರಿ ಸರಕಾರಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ.
ಬಸ್ ಚಾಲಕ ತಾರೇಶ್ ಹಾಗೂ ನಿರ್ವಾಹಕ ವಾಸಿಮ್ ದೇಸಾಯಿ ಅವರ ಮಾನವೀಯ ಕಳಕಳಿಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…