Featured

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ – vishwanews24

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ.

ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು ಇನ್ನೂ ಸಾಧ್ಯವಾಗಿಲ್ಲ ಎಂದು ಸರ್ಕಾರಿ ಮಾಧ್ಯಮ ತಿಳಿಸಿದೆ. ಇಂದು ಸೂರ್ಯ ಉದಯಿಸುತ್ತಿದ್ದಂತೆ, ರಕ್ಷಕರು ಹೆಲಿಕಾಪ್ಟರ್ ನ್ನು ಸುಮಾರು 2 ಕಿಲೋಮೀಟರ್ (1.25 ಮೈಲುಗಳು) ದೂರದಿಂದ ನೋಡಿದ್ದಾರೆ ಎಂದು ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿಯ ಮುಖ್ಯಸ್ಥ ಪಿರ್ ಹೊಸೈನ್ ಕೊಲಿವಾಂಡ್ ಸರ್ಕಾರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಹೆಲಿಕಾಪ್ಟರ್ ನಿನ್ನೆ ಪತನಗೊಂಡಿತ್ತು. ಅದರಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ಡೊಲ್ಹಿಯಾನ್, ಅಧಿಕಾರಿಗಳು ಮತ್ತು ಇತರರು ಪ್ರಯಾಣಿಸುತ್ತಿದ್ದರು.

ಇಬ್ರಾಹಿಂ ರೈಸಿ ಮತ್ತು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ನೇತೃತ್ವದಲ್ಲಿ ಇರಾನ್ ಕಳೆದ ತಿಂಗಳು ಇಸ್ರೇಲ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿತ್ತು. ಯುರೇನಿಯಂನ್ನು ಶಸ್ತ್ರಾಸ್ತ್ರ-ದರ್ಜೆಯ ಮಟ್ಟಕ್ಕೆ ಎಂದಿಗಿಂತಲೂ ಹತ್ತಿರದಲ್ಲಿ ಉತ್ಕ್ರೃಷ್ಠಗೊಳಿಸಿತ್ತು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿಯೊಂದಿಗೆ ಇರಾನ್‌ನ ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್, ಇರಾನ್‌ನ ಪೂರ್ವ ಅಜೆರ್‌ಬೈಜಾನ್ ಪ್ರಾಂತ್ಯದ ಗವರ್ನರ್, ಇತರ ಅಧಿಕಾರಿಗಳು ಮತ್ತು ಅಂಗರಕ್ಷಕರು ಇದ್ದರು ಎಂದು ಸರ್ಕಾರಿ ಐಆರ್‌ಎನ್‌ಎ ಸುದ್ದಿ ಸಂಸ್ಥೆ ವರದಿ ಮಾಡಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago