Featured

ಹೆಲಿಕಾಪ್ಟರ್ ದುರಂತ: ಗ್ರೂ‍ಪ್ ಕ್ಯಾಪ್ಟನ್‌ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ – VIshwanews24

ಹೆಲಿಕಾಪ್ಟರ್ ದುರಂತ: ಗ್ರೂ‍ಪ್ ಕ್ಯಾಪ್ಟನ್‌ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ – VIshwanews24

ನವದೆಹಲಿ: ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್‌ ದುರಂತದಲ್ಲಿ ವರುಣ್ ಸಿಂಗ್‌ ಗಂಭೀರವಾಗಿ ಗಾಯಗೊಂಡಿದ್ದರು.
ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್‌ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿದೆ.

ಇತ್ತೀಚೆಗೆ ವರುಣ್‌ ಅವರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಚರ್ಮ ಬ್ಯಾಂಕ್‌ನಿಂದ ಕಮಾಂಡೊ ಆಸ್ಪತ್ರೆಗೆ ಚರ್ಮ ರವಾನಿಸಲಾಗಿದೆ.

‘ವರುಣ್‌ ಸಿಂಗ್‌ ಅವರ ದೇಹದಲ್ಲಿ ಅಪಾರ ಪ್ರಮಾಣದ ಸುಟ್ಟ ಗಾಯಗಳಾಗಿವೆ. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೊ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್‌ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.

ಹೆಲಿಕಾಪ್ಟರ್‌ ಅವಘಡದಲ್ಲಿ ಸಿಡಿಎಸ್‌ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.
ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್‌ನಲ್ಲಿ ವರುಣ್‌ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

10 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

12 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

12 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

13 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

13 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

13 hours ago