Featured

ಹೆಲ್ಮೆಟ್ ಧರಿಸದ ಯುವಕರಿಗೆ ಗುಲಾಬಿ ನೀಡಿ ಬುದ್ಧಿವಾದ ಹೇಳಿದ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಠಾಣಾ ಮಹಿಳಾ ಪೊಲೀಸ್ ಅಧಿಕಾರಿ – Vishwanews24

ಮಂಗಳೂರು, : ಅಕ್ರಮಕ್ಕೆ ಅಂಕುಶ ಹಾಕಿ ಸ್ಥಳೀಯರ ಮೆಚ್ಚುಗೆಗೆ ಪಾತ್ರರಾದ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಠಾಣಾ  ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ರಸ್ತೆ ಸುರಕ್ಷತೆ ಬಗ್ಗೆ ಚಾಲಕರಲ್ಲಿ ಜಾಗೃತಿ ಮೂಡಿಸಲು  ಹೆಲ್ಮೆಟ್ ಧರಿಸದೇ ಸುತ್ತಾಡುವ ಯವಕರಿಗೆ ತಕ್ಕ ಪಾಠ ಕಲಿಸಿದ್ದಾರೆ.

ಹೆಲ್ಮೆಟ್ ಧರಿಸದೇ ಬೈಕ್ ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನ ಅಡ್ಡ ಹಾಕಿದ ಮಹಿಳಾ ಸಬ್ ಇನ್ಸ್ ಪೆಕ್ಟರ್ ಒಬ್ಬರು ಯುವಕನಿಗೆ ಗುಲಾಬಿ ಕೊಟ್ಟು, ಇನ್ನಾದರೂ ಹೆಲ್ಮೆಟ್ ಧರಿಸಿ ಸಂಚರಿಸು ಎಂದು ಬುದ್ಧಿವಾದ ಹೇಳಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಡಂತ್ಯಾರಿನಲ್ಲಿ ನಡೆದಿದೆ.

ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ  ನಿನ್ನೆ ಗುರುವಾರ  ಮಡಂತ್ಯಾರು ಪೇಟೆಯಲ್ಲಿ  ಯುವಕರಿಬ್ಬರು ಬೈಕ್ ನಲ್ಲಿ ಬರುತ್ತಿರುವುದನ್ನು ಗಮನಿಸಿದ ಸೌಮ್ಯರಾಣಿ ಬೈಕನ್ನು ನಿಲ್ಲಿಸಿದ್ದಾರೆ.  ಈ ಸಂದರ್ಭದಲ್ಲಿ ಎಸ್ಸೈ ಸೌಮ್ಯ ಅವರು ಬೈಕ್ ನಲ್ಲಿದ್ದ ಯುವಕನಿಗೆ ಗುಲಾಬಿ ಕೊಟ್ಟು ಬುದ್ಧಿ ಮಾತು ಹೇಳಿದ್ದಾರೆ. ಇನ್ನಾದರೂ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಸಾರ್ವಜನಿಕರು ಕೂಡ ಈ ಘಟನೆಗೆ ಸಾಕ್ಷಿಯಾಗಿದ್ದಾರೆ.

ರಸ್ತೆ ಅಪಘಾತ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸೌಮ್ಯ ಹಾಗೂ ಸಿಬ್ಬಂದಿಗಳ ತಂಡ ಶಾಲಾ ಮಕ್ಕಳ, ಕಾಲೇಜು ವಿದ್ಯಾರ್ಥಿಗಳ ಜೊತೆಗೂಡಿ ಹೆಲ್ಮೆಟ್ ಇಲ್ಲದ ಪ್ರಯಾಣಿಕರಿಗೆ, ಸೀಟ್ ಬೆಲ್ಟ್ ಹಾಕದೆ ಚಲಾವಣೆ ಮಾಡುವ ಚಾಲಕರಿಗೆ ಗುಲಾಬಿ ಹೂ ಕೊಟ್ಟು ಬುದ್ದಿ ಮಾತಿನಲ್ಲಿ ಎಚ್ಚರಿಕೆ ನೀಡಿದರು.

ಯುವಕರಿಗೆ ಗುಲಾಬಿ ಹೂ ನೀಡಿ, ಎಸ್ಸೈ ಬುದ್ದಿವಾದ ಹೇಳುತ್ತಿರುವ ಫೋಟೋ ಒಂದು ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

Vishwa News 24

Recent Posts

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

9 minutes ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

36 minutes ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

44 minutes ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

1 hour ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

1 hour ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

2 hours ago