ಉಡುಪಿ: ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ದಿಢೀರ್ ಆಗಿ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಚರ್ಚೆಯೊಂದು ಜೋರಾಗಿತ್ತು. ಇದೀಗ ಈ ಸುದ್ದಿಗೆ ಸಚಿವೆ ಸ್ಪಷ್ಟನೆ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.
ಶೋಭಾ ಕರಂದ್ಲಾಜೆ ಹೆಸರು ಬದಲಿಸುವ ಚರ್ಚೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ರಾಜಕಾರಣಿಗಳನ್ನ ಕೆಲವರು ಜೋಕರ್ಸ್ ಅಂದುಕೊಂಡಿದ್ದಾರೆ ಎಂದು ಗರಂ ಆದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಾಧ್ಯಮ, ಸಾಮಾಜಿಕ, ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಬೇಕು. ಈ ರೀತಿ ಮಾಡುವವರಿಗೆ ಇದು ನನ್ನ ವಿನಮ್ರ ವಿನಂತಿ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: RSS ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ : ಸಿಎಂ ಬೊಮ್ಮಾಯಿ – Vishwanews24
ಹೆಸರು ಬದಲಾವಣೆ: ಬಿಜೆಪಿ ಯಲ್ಲಿ ಒಂದು ವರ್ಗದ ಪ್ರಕಾರ 2023ರ ಚುನಾವಣೆಗೆ ತಯಾರಿ ನಡೆಸಲಾಗುತ್ತಿದ್ದು, ಶೋಭಾ ಕರಂದ್ಲಾಜೆ ಅವರು ಶೋಭಾ ಗೌಡ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೆಸರು ಬದಲಾಯಿಸಿಕೊಂಡು ರಾಜ್ಯ ರಾಜಕಾರಣಕ್ಕೆ ಶೋಭಾ ಕರಂದ್ಲಾಜೆ ಬರಲಿದ್ದಾರೆ. ರಾಜ್ಯದಲ್ಲಿ ಮಹತ್ವದ ಸ್ಥಾನ ಅಲಂಕರಿಸಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…
ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…