ಉಡುಪಿ: ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ದಿಢೀರ್ ಆಗಿ ತಮ್ಮ ಹೆಸರನ್ನು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂಬ ಚರ್ಚೆಯೊಂದು ಜೋರಾಗಿತ್ತು. ಇದೀಗ ಈ ಸುದ್ದಿಗೆ ಸಚಿವೆ ಸ್ಪಷ್ಟನೆ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.
ಶೋಭಾ ಕರಂದ್ಲಾಜೆ ಹೆಸರು ಬದಲಿಸುವ ಚರ್ಚೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ರಾಜಕಾರಣಿಗಳನ್ನ ಕೆಲವರು ಜೋಕರ್ಸ್ ಅಂದುಕೊಂಡಿದ್ದಾರೆ ಎಂದು ಗರಂ ಆದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಾಧ್ಯಮ, ಸಾಮಾಜಿಕ, ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಬೇಕು. ಈ ರೀತಿ ಮಾಡುವವರಿಗೆ ಇದು ನನ್ನ ವಿನಮ್ರ ವಿನಂತಿ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: RSS ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ : ಸಿಎಂ ಬೊಮ್ಮಾಯಿ – Vishwanews24
ಹೆಸರು ಬದಲಾವಣೆ: ಬಿಜೆಪಿ ಯಲ್ಲಿ ಒಂದು ವರ್ಗದ ಪ್ರಕಾರ 2023ರ ಚುನಾವಣೆಗೆ ತಯಾರಿ ನಡೆಸಲಾಗುತ್ತಿದ್ದು, ಶೋಭಾ ಕರಂದ್ಲಾಜೆ ಅವರು ಶೋಭಾ ಗೌಡ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೆಸರು ಬದಲಾಯಿಸಿಕೊಂಡು ರಾಜ್ಯ ರಾಜಕಾರಣಕ್ಕೆ ಶೋಭಾ ಕರಂದ್ಲಾಜೆ ಬರಲಿದ್ದಾರೆ. ರಾಜ್ಯದಲ್ಲಿ ಮಹತ್ವದ ಸ್ಥಾನ ಅಲಂಕರಿಸಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…