ಹೆಸ್ಕಾಂನಲ್ಲಿ 86 ಕೋಟಿ ರೂ. ಅಕ್ರಮ : 20 ಮಂದಿ ಸಸ್ಪೆಂಡ್‌ ;  7 ಅಧಿಕಾರಿಗಳ ವರ್ಗಾವಣೆ :ಇಂಧನ ಸಚಿವ ಸುನಿಲ್‌ ಕುಮಾರ್ ಆದೇಶ – Vishwanews24

Featured, ರಾಜ್ಯ ನ್ಯೂಸ್

7 ಅಧಿಕಾರಿಗಳ ವರ್ಗಾವಣೆ: ತನಿಖೆ ನಡೆಸಿ ಶಿಕ್ಷೆ ..
 ಅವ್ಯವಹಾರಕ್ಕೆ ಪ್ರೇರಣೆ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ನಿಶ್ಚಿತ ..

ಬೆಂಗಳೂರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ ) ವ್ಯಾಪ್ತಿಯ ಅಥಣಿ ವಿಭಾಗದಲ್ಲಿ ನಡೆದ ಕಾಮಗಾರಿಗಳಲ್ಲಿ ನಡೆದ ಅವ್ಯವಹಾರ ಸಂಬಂಧ ತನಿಖೆ ನಡೆಸಿರುವ ಇಂಧನ ಇಲಾಖೆ ಅಕ್ರಮಕ್ಕೆ ಕಾರಣರಾದ 20 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಸುಮಾರು 86 ಕೋಟಿ ರೂ. ಮೊತ್ತದ ಅವ್ಯವಹಾರಕ್ಕೆ ಅಧಿಕಾರಿಗಳು ಕಾರಣರಾಗಿದ್ದು, ಇದರಿಂದ ಇಲಾಖೆಗೆ ಆಥಿಕ ನಷ್ಟವಾಗುವ ಜತೆಗೆ ಸಾರ್ವಜನಿಕರಿಗೆ ಅಗತ್ಯವಾದ ಕಾಮಗಾರಿಗಳ ಗುಣಮಟ್ಟದಲ್ಲೂ ನ್ಯೂನ್ಯತೆ ಸೃಷ್ಟಿಯಾಗಿತ್ತು. ಈ ಸಂಬಂಧ ತನಿಖಾ ತಂಡ ನೀಡಿದ ವರದಿಯ ಶಿಫಾರಸಿನ ಅನ್ವಯ ಹೆಚ್ಚುವರಿ ಕಾರ್ವನಿರ‍್ವಾಹಕ ಎಂಜಿನಿಯರ್ ಸೇರಿ 20 ಜನರನ್ನು ಅಮಾನತುಗೊಳಿಸುವಂತೆ ಕನ್ನಡ-ಸಂಸ್ಕೃತಿ ಮತ್ತು ಇಂಧನ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಆದೇಶ ನೀಡಿದ್ದಾರೆ.

2018ರಿಂದ 2021ರ ಅವಧಿಯಲ್ಲಿ ನಡೆದ ಯುಎನ್‌ಐಪಿ, ಕಾಪೆಕ್ಸ್, ಗಂಗಾ ಕಲ್ಯಾಣ, ನೀರು ಸರಬರಾಜು, ಓಟಿಎಂ, ಪ್ರಧಾನಮಂತ್ರಿ ಗ್ರಾಮೀಣ ವಿದ್ಯುದೀಕರಣ ಯೋಜನೆ ಸೇರಿದಂತೆ ನಾಗರಿಕರಿಕರಿಗೆ ನೇರವಾಗಿ ಸಂಬಂಧಪಟ್ಟ ಕಾಮಗಾರಿಗಳಲ್ಲಿ ಅವ್ಯವಹಾರ ಎಸಗಿರುವುದು ಇಲಾಖೆ ನಡೆಸಿದ ಆಂತರಿಕ ತನಿಖೆಯಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ :

ದೇಶದಲ್ಲೇ ಮಾದರಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನಾಗಿಸುವ ಯೊಜನೆ ರಾಜ್ಯ ಸರ್ಕಾರದಿಂದ ಅನುಷ್ಠಾನ : ಸಚಿವ ಡಾ.ಕೆ.ಸುಧಾಕರ್ – Vishwanews24

2018ರಿಂದ 2021ರ ಅವಧಿಗೆ ಅನ್ವಯವಾಗುವಂತೆ ಹೆಸ್ಕಾಂನ ಅಥಣಿ ವಿಭಾಗದಲ್ಲಿ ನಾನಾ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಟೆಂಡರ್ ಕರೆಯಲಾಗಿತ್ತು. ಆದರೆ ಇದರಲ್ಲಿ ಅವ್ಯವಹಾರವಾಗಿದೆ. ಸಂಸ್ಥೆಗೆ ಆರ್ಥಿಕ ನಷ್ಟವುಂಟು ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಹಾಗೂ ಅನೇಕ ಸಂಘಟನೆಗಳಿಂದ ದೂರು ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ತಾಂತ್ರಿಕ ನಿರ್ದೇಶಕ, ಹಣಕಾಸು ಅಧಿಕಾರಿಗಳ ತಂಡ ಆಗಷ್ಟ್ 14ರಂದು ಸ್ಥಳ ಪರಿಶೀಲನೆ ನಡೆಸಿದಾಗ ಮೇಲ್ನೋಟಕ್ಕೆ ಅವ್ಯವಹಾರ ನಡೆದಿರುವುದು ಖಾತ್ರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಾಖಾವಾರು ವರದಿ ನೀಡುವಂತೆ ಸೂಚನೆ ನೀಡಿದ್ದರ ಜತೆಗೆ ಆಂತರಿಕ ತನಿಖೆಗೆ ಸೂಚನೆ ನೀಡಲಾಗಿತ್ತು.

ತನಿಖಾ ಸಂರ‍್ಭದಲ್ಲಿ ಅಧಿಕಾರಿಗಳ ಕೈವಾಡದಿಂದಲ್ಲೇ ಅವ್ಯವಹಾರ ಹಾಗೂ ನಷ್ಟವುಂಟಾಗಿರುವುದು ದೃಢಪಟ್ಟಿದೆ. ಒಟ್ಟಾರೆಯಾಗಿ 29.72ಕೋಟಿ ರೂ.ನ್ನು ಕಾಮಗಾರಿ ನಿರ್ವಹಣೆ ಮಾಡದೇ ಹಣ ಪಾವತಿ ಮಾಡಿರುವ ಗಂಭೀರ ಲೋಪ ಪತ್ತೆಯಾಗಿದೆ. ಜತೆಗೆ ಇದರಿಂದಾಗಿ ಇಲಾಖೆಗೆ 57.16ಕೋಟಿ ರೂ. ನಿಯಮ ಬಾಹಿರವಾಗಿ ವೆಚ್ಚವಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಇದನ್ನೂ ಓದಿ :

ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬಂದರೆ ಸೇರಿಸಿಕೊಳ್ಳಲಾಗುವುದು : ಸಿದ್ದರಾಮಯ್ಯ -Vishwanews24

 

Leave a Reply