Featured

ಹೆಸ್ಕಾಂನಲ್ಲಿ 86 ಕೋಟಿ ರೂ. ಅಕ್ರಮ : 20 ಮಂದಿ ಸಸ್ಪೆಂಡ್‌ ;  7 ಅಧಿಕಾರಿಗಳ ವರ್ಗಾವಣೆ :ಇಂಧನ ಸಚಿವ ಸುನಿಲ್‌ ಕುಮಾರ್ ಆದೇಶ – Vishwanews24

7 ಅಧಿಕಾರಿಗಳ ವರ್ಗಾವಣೆ: ತನಿಖೆ ನಡೆಸಿ ಶಿಕ್ಷೆ ..
ಅವ್ಯವಹಾರಕ್ಕೆ ಪ್ರೇರಣೆ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ನಿಶ್ಚಿತ ..

ಬೆಂಗಳೂರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ ) ವ್ಯಾಪ್ತಿಯ ಅಥಣಿ ವಿಭಾಗದಲ್ಲಿ ನಡೆದ ಕಾಮಗಾರಿಗಳಲ್ಲಿ ನಡೆದ ಅವ್ಯವಹಾರ ಸಂಬಂಧ ತನಿಖೆ ನಡೆಸಿರುವ ಇಂಧನ ಇಲಾಖೆ ಅಕ್ರಮಕ್ಕೆ ಕಾರಣರಾದ 20 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಸುಮಾರು 86 ಕೋಟಿ ರೂ. ಮೊತ್ತದ ಅವ್ಯವಹಾರಕ್ಕೆ ಅಧಿಕಾರಿಗಳು ಕಾರಣರಾಗಿದ್ದು, ಇದರಿಂದ ಇಲಾಖೆಗೆ ಆಥಿಕ ನಷ್ಟವಾಗುವ ಜತೆಗೆ ಸಾರ್ವಜನಿಕರಿಗೆ ಅಗತ್ಯವಾದ ಕಾಮಗಾರಿಗಳ ಗುಣಮಟ್ಟದಲ್ಲೂ ನ್ಯೂನ್ಯತೆ ಸೃಷ್ಟಿಯಾಗಿತ್ತು. ಈ ಸಂಬಂಧ ತನಿಖಾ ತಂಡ ನೀಡಿದ ವರದಿಯ ಶಿಫಾರಸಿನ ಅನ್ವಯ ಹೆಚ್ಚುವರಿ ಕಾರ್ವನಿರ‍್ವಾಹಕ ಎಂಜಿನಿಯರ್ ಸೇರಿ 20 ಜನರನ್ನು ಅಮಾನತುಗೊಳಿಸುವಂತೆ ಕನ್ನಡ-ಸಂಸ್ಕೃತಿ ಮತ್ತು ಇಂಧನ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಆದೇಶ ನೀಡಿದ್ದಾರೆ.

2018ರಿಂದ 2021ರ ಅವಧಿಯಲ್ಲಿ ನಡೆದ ಯುಎನ್‌ಐಪಿ, ಕಾಪೆಕ್ಸ್, ಗಂಗಾ ಕಲ್ಯಾಣ, ನೀರು ಸರಬರಾಜು, ಓಟಿಎಂ, ಪ್ರಧಾನಮಂತ್ರಿ ಗ್ರಾಮೀಣ ವಿದ್ಯುದೀಕರಣ ಯೋಜನೆ ಸೇರಿದಂತೆ ನಾಗರಿಕರಿಕರಿಗೆ ನೇರವಾಗಿ ಸಂಬಂಧಪಟ್ಟ ಕಾಮಗಾರಿಗಳಲ್ಲಿ ಅವ್ಯವಹಾರ ಎಸಗಿರುವುದು ಇಲಾಖೆ ನಡೆಸಿದ ಆಂತರಿಕ ತನಿಖೆಯಿಂದ ಸ್ಪಷ್ಟವಾಗಿದೆ.

ಇದನ್ನೂ ಓದಿ :

2018ರಿಂದ 2021ರ ಅವಧಿಗೆ ಅನ್ವಯವಾಗುವಂತೆ ಹೆಸ್ಕಾಂನ ಅಥಣಿ ವಿಭಾಗದಲ್ಲಿ ನಾನಾ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಟೆಂಡರ್ ಕರೆಯಲಾಗಿತ್ತು. ಆದರೆ ಇದರಲ್ಲಿ ಅವ್ಯವಹಾರವಾಗಿದೆ. ಸಂಸ್ಥೆಗೆ ಆರ್ಥಿಕ ನಷ್ಟವುಂಟು ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಹಾಗೂ ಅನೇಕ ಸಂಘಟನೆಗಳಿಂದ ದೂರು ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ತಾಂತ್ರಿಕ ನಿರ್ದೇಶಕ, ಹಣಕಾಸು ಅಧಿಕಾರಿಗಳ ತಂಡ ಆಗಷ್ಟ್ 14ರಂದು ಸ್ಥಳ ಪರಿಶೀಲನೆ ನಡೆಸಿದಾಗ ಮೇಲ್ನೋಟಕ್ಕೆ ಅವ್ಯವಹಾರ ನಡೆದಿರುವುದು ಖಾತ್ರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಾಖಾವಾರು ವರದಿ ನೀಡುವಂತೆ ಸೂಚನೆ ನೀಡಿದ್ದರ ಜತೆಗೆ ಆಂತರಿಕ ತನಿಖೆಗೆ ಸೂಚನೆ ನೀಡಲಾಗಿತ್ತು.

ತನಿಖಾ ಸಂರ‍್ಭದಲ್ಲಿ ಅಧಿಕಾರಿಗಳ ಕೈವಾಡದಿಂದಲ್ಲೇ ಅವ್ಯವಹಾರ ಹಾಗೂ ನಷ್ಟವುಂಟಾಗಿರುವುದು ದೃಢಪಟ್ಟಿದೆ. ಒಟ್ಟಾರೆಯಾಗಿ 29.72ಕೋಟಿ ರೂ.ನ್ನು ಕಾಮಗಾರಿ ನಿರ್ವಹಣೆ ಮಾಡದೇ ಹಣ ಪಾವತಿ ಮಾಡಿರುವ ಗಂಭೀರ ಲೋಪ ಪತ್ತೆಯಾಗಿದೆ. ಜತೆಗೆ ಇದರಿಂದಾಗಿ ಇಲಾಖೆಗೆ 57.16ಕೋಟಿ ರೂ. ನಿಯಮ ಬಾಹಿರವಾಗಿ ವೆಚ್ಚವಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಇದನ್ನೂ ಓದಿ :

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

7 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

7 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago