ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೂಮಿ ಪೂಜೆಗೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಎರಡೂವರೆ ವರ್ಷ ಆಗಲಿ ಆಮೇಲೆ ಸಂಪುಟ ಪುನಾರಚನೆ ಮಾಡೋಣ ಅಂತ ಹೇಳಿದ್ದೆ. ಈಗಲೂ ಹೈಕಮಾಂಡ್ ಇರು ಅಂದ್ರೆ ಇರ್ತೀನಿ ಅಂತ ಸ್ಪಷ್ಟಪಡಿಸಿದರು.
ಇನ್ನೂ ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದೇವೆ. ಬಿಜೆಪಿಯವರು ದುಡ್ಡು ಇಲ್ಲ ಅಂತಾರೆ. ದುಡ್ಡು ಇಲ್ಲದೆ ಮಾಡೋಕೆ ಆಗುತ್ತಾ? ಬಿಜೆಪಿಯವರು ಸುಳ್ಳು ಅಪಪ್ರಚಾರ ಮಾಡುತ್ತಾರೆ ಎಂದು ಕಿಡಿಕಾರಿದರು.
ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ಸುಳ್ಳು ಹೇಳೋದು ಅವರ ಕೆಲಸ. ಗ್ಯಾರಂಟಿಗಳಿಗೆ 1 ಲಕ್ಷ ಕೋಟಿ ಖರ್ಚು ಮಾಡಿದ್ದೇವೆ. ಹೈಕಮಾಂಡ್ ಏನು ಹೇಳುತ್ತಾರೆ ಅದನ್ನೇ ಕೇಳೋದು. ನನ್ನನ್ನೇ ಮುಂದುವರೆಸಿ ಅಂದ್ರೆ ನಾನೇ ಮುಂದುವರೆಯುತ್ತೇನೆ. ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ಡಿಸಿಎಂ ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…