ಬೆಂಗಳೂರು : ಹೈಕಮಾಂಡ್ ನಿಂದ ಜು. 25 ರಂದು ಸಂದೇಶ ಬರಬಹುದು , ಅವರು ಯಾವಾಗ ರಾಜೀನಾಮೆ ನೀಡಲು ಸೂಚಿಸುತ್ತಾರೆಯೋ ಅಂದು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ನಿಂದ ನನಗೆ ಇನ್ನೂ ಅಧಿಕೃತ ಸೂಚನೆ ಬಂದಿಲ್ಲ. 25ರ ಬಳಿಕ ಬರುವ ಸಂದೇಶಕ್ಕಾಗಿ ನಾನು ಕಾಯುತ್ತಿದ್ದೇನೆ. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ.ಅಧಿಕಾರ ಇಲ್ಲದೇ ಇದ್ದರೂ ಪಕ್ಷ ಸಂಘಟನೆಗೆ ನಾನು ದುಡಿಯುತ್ತೇನೆ. ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಹತ್ತಾರು ವರ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾರ ಸೂಚನೆಯನ್ನು ಪಾಲಿಸುತ್ತೇನೆ. ಮುಂದೆ ಯಾರನ್ನು ಸಿಎಂ ಮಾಡಬೇಕೆಂದು ನಾನು ಹೇಳುವುದಿಲ್ಲ. ಹೈಕಮಾಂಡ್ ಯಾವ ತೀರ್ಮಾನ ಬೇಕಾದರೂ ಮಾಡಲಿ. ಯಾವ ಸಮುದಾಯಕ್ಕೆ ನೀಡಬೇಕೆಂಬುದರ ಬಗ್ಗೆಯೂ ನಾನು ಮಾತಾನಾಡುವುದಿಲ್ಲ. ಯಾವುದೇ ಹೆಸರನ್ನು ನಾನು ಶಿಫಾರಸ್ಸು ಮಾಡುವುದಿಲ್ಲ ಯಾರನ್ನು ಸಿಎಂ ಮಾಡಬೇಕೆಂದು ಸಲಹೆ ನೀಡಲ್ಲ ಈಗಲೇ ಯಾಕೆ ಅವಸರದ ಮಾತು ಎಂದು ಮರು ಪ್ರಶ್ನಿಸಿದರು
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…