ನವದೆಹಲಿ:ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಐಪಿಸಿ ಸೆಕ್ಷನ್ 120 ಬಿ ಬಗ್ಗೆ ವಿವರಣೆ ನೀಡಿ ತೀರ್ಪನ್ನು ಪ್ರಕಟಿಸಿದರು. ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು.
ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟಾ ಅವರು ತೀರ್ಪನ್ನು ಪ್ರಕಟಿಸಿದ್ದು, ಶಾಸಕ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ನೀಡುವುದಕ್ಕೆ ಒಪ್ಪಿಕೊಂಡಿದ್ದು, ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಜಾರಿ ನಿರ್ದೇಶನಾಲಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ವಾದ ಮಂಡಿಸಿದ್ದರು. ಈ ಎಲ್ಲಾ ವಾದದ ಬಳಿಕ ಹೈಕೋರ್ಟ್ ನ್ಯಾಯ ಮೂರ್ತಿ ಸುರೇಶ್ ಕುಮಾರ್ ಕೈಟ್ ಡಿಕೆ ಶಿವಕುಮಾರ್ ಅವರಿಗೆ ಷರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದರು,
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…