ಚೆನ್ನೈ: ಮರೀನಾ ಬೀಚ್ನಲ್ಲಿ ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ತಮಿಳುನಾಡು ಹೈಕೋರ್ಟ್ ಅನುಮತಿ ನೀಡಿದ್ದು. ಅವಕಾಶ ನೀಡಲು ನಿರಾಕರಿಸಿದ್ದ ತಮಿಳುನಾಡು ಎಐಎಡಿಎಂಕೆ ಸರ್ಕಾರಕ್ಕೆ ಮುಖಭಂಗವಾಗಿದೆ.
ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಡಿಎಂಕೆ ಎಂದು ಮನವಿ ಮಾಡಿತ್ತು. ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಎಂಕೆ ಹೈಕೋರ್ಟ್ ಮೆಟ್ಟಿಲೇರಿತ್ತು.
ಮರೀನಾ ಬೀಚ್ನಲ್ಲಿ ಸಮಾಧಿ ಮಾಡಲು ಅವಕಾಶ ನೀಡಬಾರದು ಎಂದು ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ ಐವರು ಹೈ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಐವರೂ ಅರ್ಜಿಗಳನ್ನು ವಾಪಾಸ್ ಪಡೆದಿದ್ದರು.
ಈ ವಿವಾದದ ಕುರಿತು ಮಂಗಳವಾರ ಮಧ್ಯರಾತ್ರಿವರೆಗೂ ವಿಚಾರಣೆ ನಡೆಯಿತಾದರೂ ಯಾವುದೇ ಆದೇಶ ಹೊರಬೀಳದೆ ಬುಧವಾರ ಬೆಳಗ್ಗೆ 8 ಗಂಟೆಗೆ ವಿಚಾರಣೆ ಮುಂದೂಡಿಕೆಯಾಗಿತ್ತು.
ಕರ್ನಾಟಕ ಮೂಲದ ಹಂಗಾಮಿ ಸಿಜೆ ಹುಲುವಾಡಿ ಜಿ.ರಮೇಶ್ ನಿವಾಸದಲ್ಲಿ ವಿಚಾರಣೆ ನಡೆಯಿತು. ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಅರ್ಜಿ ಸುಧೀರ್ಘ ವಿಚಾರಣೆ 2 ಗಂಟೆಗಳ ಬಳಿಕ ಅಂತ್ಯಗೊಂಡು ಕೋರ್ಟ್ ತೀರ್ಪು ಹೊರಹಾಕಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…