ಚೆನ್ನೈ: ಮರೀನಾ ಬೀಚ್ನಲ್ಲಿ ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ತಮಿಳುನಾಡು ಹೈಕೋರ್ಟ್ ಅನುಮತಿ ನೀಡಿದ್ದು. ಅವಕಾಶ ನೀಡಲು ನಿರಾಕರಿಸಿದ್ದ ತಮಿಳುನಾಡು ಎಐಎಡಿಎಂಕೆ ಸರ್ಕಾರಕ್ಕೆ ಮುಖಭಂಗವಾಗಿದೆ.
ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಡಿಎಂಕೆ ಎಂದು ಮನವಿ ಮಾಡಿತ್ತು. ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಎಂಕೆ ಹೈಕೋರ್ಟ್ ಮೆಟ್ಟಿಲೇರಿತ್ತು.
ಮರೀನಾ ಬೀಚ್ನಲ್ಲಿ ಸಮಾಧಿ ಮಾಡಲು ಅವಕಾಶ ನೀಡಬಾರದು ಎಂದು ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ ಐವರು ಹೈ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಐವರೂ ಅರ್ಜಿಗಳನ್ನು ವಾಪಾಸ್ ಪಡೆದಿದ್ದರು.
ಈ ವಿವಾದದ ಕುರಿತು ಮಂಗಳವಾರ ಮಧ್ಯರಾತ್ರಿವರೆಗೂ ವಿಚಾರಣೆ ನಡೆಯಿತಾದರೂ ಯಾವುದೇ ಆದೇಶ ಹೊರಬೀಳದೆ ಬುಧವಾರ ಬೆಳಗ್ಗೆ 8 ಗಂಟೆಗೆ ವಿಚಾರಣೆ ಮುಂದೂಡಿಕೆಯಾಗಿತ್ತು.
ಕರ್ನಾಟಕ ಮೂಲದ ಹಂಗಾಮಿ ಸಿಜೆ ಹುಲುವಾಡಿ ಜಿ.ರಮೇಶ್ ನಿವಾಸದಲ್ಲಿ ವಿಚಾರಣೆ ನಡೆಯಿತು. ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಅರ್ಜಿ ಸುಧೀರ್ಘ ವಿಚಾರಣೆ 2 ಗಂಟೆಗಳ ಬಳಿಕ ಅಂತ್ಯಗೊಂಡು ಕೋರ್ಟ್ ತೀರ್ಪು ಹೊರಹಾಕಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…