ಚೆನ್ನೈ: ಮರೀನಾ ಬೀಚ್ನಲ್ಲಿ ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ತಮಿಳುನಾಡು ಹೈಕೋರ್ಟ್ ಅನುಮತಿ ನೀಡಿದ್ದು. ಅವಕಾಶ ನೀಡಲು ನಿರಾಕರಿಸಿದ್ದ ತಮಿಳುನಾಡು ಎಐಎಡಿಎಂಕೆ ಸರ್ಕಾರಕ್ಕೆ ಮುಖಭಂಗವಾಗಿದೆ.
ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಡಿಎಂಕೆ ಎಂದು ಮನವಿ ಮಾಡಿತ್ತು. ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿಎಂಕೆ ಹೈಕೋರ್ಟ್ ಮೆಟ್ಟಿಲೇರಿತ್ತು.
ಮರೀನಾ ಬೀಚ್ನಲ್ಲಿ ಸಮಾಧಿ ಮಾಡಲು ಅವಕಾಶ ನೀಡಬಾರದು ಎಂದು ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ ಐವರು ಹೈ ಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಐವರೂ ಅರ್ಜಿಗಳನ್ನು ವಾಪಾಸ್ ಪಡೆದಿದ್ದರು.
ಈ ವಿವಾದದ ಕುರಿತು ಮಂಗಳವಾರ ಮಧ್ಯರಾತ್ರಿವರೆಗೂ ವಿಚಾರಣೆ ನಡೆಯಿತಾದರೂ ಯಾವುದೇ ಆದೇಶ ಹೊರಬೀಳದೆ ಬುಧವಾರ ಬೆಳಗ್ಗೆ 8 ಗಂಟೆಗೆ ವಿಚಾರಣೆ ಮುಂದೂಡಿಕೆಯಾಗಿತ್ತು.
ಕರ್ನಾಟಕ ಮೂಲದ ಹಂಗಾಮಿ ಸಿಜೆ ಹುಲುವಾಡಿ ಜಿ.ರಮೇಶ್ ನಿವಾಸದಲ್ಲಿ ವಿಚಾರಣೆ ನಡೆಯಿತು. ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾದ ಅರ್ಜಿ ಸುಧೀರ್ಘ ವಿಚಾರಣೆ 2 ಗಂಟೆಗಳ ಬಳಿಕ ಅಂತ್ಯಗೊಂಡು ಕೋರ್ಟ್ ತೀರ್ಪು ಹೊರಹಾಕಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…