Featured

ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ – vishwanews24

ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ  : ಏನಿದು ಪ್ರಕರಣ?

ಬೆಂಗಳೂರು : ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಉಗ್ರ ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ ತಮಿಳುನಾಡು ಸರ್ಕಾರ ಸೇರಿದಂತೆ ಅಲ್ಲಿನ ಜನಪ್ರತಿನಿಧಿಗಳು ಕಿಡಿಕಾರಿದ್ದರು. ಇದೀಗ ಈ ಸಂಬಂಧ ಶೋಭಾ ಕರಂದ್ಲಾಜೆ ಅವರು ಮದ್ರಾಸ್ ಹೈಕೋರ್ಟ್ ನಲ್ಲಿ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ಸೆಪ್ಟೆಂಬರ್​ 3 ರಂದು ನಡೆಯಿತು. ಶೋಭಾ ಪರ ವಾದ ಮಂಡಿಸಿದ ವಕೀಲರು, ಸಚಿವರ ಹೇಳಿಕೆಗೆ ಸಂಬಂಧಿಸಿ ತಮಿಳುನಾಡು ಜನರ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರದಿಂದ ಸೂಕ್ತ ಸೂಚನೆ ಪಡೆದ ನಂತರ ತಿಳಿಸುವೆ ಎಂದು ಹೇಳಿದ್ದಾರೆ.

ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಜನರ ಬಗ್ಗೆ ನನಗೆ ಹೆಚ್ಚಿನ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶ ನನ್ನದಾಗಿರಲಿಲ್ಲ. ಆದ್ದರಿಂದ, ನನ್ನ ಹೇಳಿಕೆಯಿಂದ ಯಾವುದೇ ನೋವನ್ನು ಉಂಟು ಮಾಡಿದ್ದಕ್ಕಾಗಿ ನಾನು ಮತ್ತೊಮ್ಮೆ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸುತ್ತೇನೆ. ನ್ಯಾಯದ ಹಿತಾಸಕ್ತಿಯಿಂದ ಈ ಹೇಳಿಕೆ ನೀಡಿದ್ದೇನೆ, ಹಾಗಂತ ಉದ್ದೇಶಿತವಲ್ಲ ಎಂದು ಹೇಳಿದ್ದಾರೆ.

ಮಾರ್ಚ್ 1ರಂದು ಬೆಂಗಳೂರಿನ ಜನಪ್ರಿಯ ಉಪಾಹಾರ ಗೃಹವಾದ ರಾಮೇಶ್ವರಂ ಕೆಫೆಯಲ್ಲಿ ಲಘು ಬಾಂಬ್ ಸ್ಫೋಟ ಸಂಭವಿಸಿತ್ತು. ಆಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಬಾಂಬ್ ಸ್ಫೋಟದೊಂದಿಗೆ ತಮಿಳುನಾಡನ್ನು ತಳುಕು ಹಾಕಿದ್ದರು. ಈ ಸಂಬಂಧ ಮದುರೈ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ, ಶೋಭಾ ಕರಂದ್ಲಾಜೆ ಅವರು, ತಮ್ಮ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ಕೈಬಿಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾ. ಜಿ. ಜಯಚಂದ್ರನ್ ನೇತೃತ್ವದ ನ್ಯಾಯಪೀಠದೆದುರು ಪ್ರಮಾಣ ಪತ್ರ ಸಲ್ಲಿಸಿರುವ ಶೋಭಾ ಕರಂದ್ಲಾಜೆ, ನಾನು ತಮಿಳುನಾಡು ಜನರ ಕುರಿತು ನೀಡಿದ್ದ ಹೇಳಿಕೆಯಲ್ಲಿ ಯಾರದೇ ಭಾವನೆಗಳಿಗೆ ಘಾಸಿಯುಂಟು ಮಾಡುವ ಉದ್ದೇಶವಿರಲಿಲ್ಲ. ನಾನು ಈಗಾಗಲೇ ನನ್ನ ಹೇಳಿಕೆಯನ್ನು ಹಿಂಪಡೆದಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಈಗಾಗಲೇ ಕ್ಷಮಾಪಣೆ ಕೋರಿದ್ದೇನೆ ಎಂದೂ ಪ್ರಮಾಣ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ. ಇನ್ನು ಕೋರ್ಟ್​ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

12 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

15 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

15 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

15 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

15 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

15 hours ago