Featured

ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ : ತನಿಖೆ ಸಿಸಿಬಿಗೆ ವರ್ಗಾವಣೆ – vishwanews24

ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣ : ತನಿಖೆ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಇತ್ತೀಚೆಗೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಈ ಪ್ರಕರಣ ತನಿಖೆಯನ್ನು ಸಿಸಿಬಿ  ವರ್ಗಾಯಿಸಿದ್ದಾರೆ.

ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕಾಲ್ ಲಿಸ್ಟ್ ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ಚೈತ್ರಾ ಮೊಬೈಲ್ ಲಾಕ್ ಆಗಿದ್ದು, ಅದನ್ನು ಓಪನ್ ಮಾಡಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಅಲ್ಲದೇ ಚೈತ್ರಾ ಸಾವಿಗೂ ಹಿಂದಿನ 15 ದಿನಗಳ ಸಿಸಿಟಿವಿ ಪರಿಶೀಲನೆಗೆ ನಡೆಸುತ್ತಿದ್ದಾರೆ. ಸದ್ಯ ಚೈತ್ರಾ ಮರಣೋತ್ತರ ಪರೀಕ್ಷೆಯ ವರದಿಗಾಗಿ ಸಿಸಿಬಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಮೇ 11 ರಂದು ಚೈತ್ರಾಗೌಡ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್‍ನಲ್ಲಿ ಖಿನ್ನತೆಗೆ ಒಳಗಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿತ್ತು. ಅವರ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಬೆಂಗಳೂರು ವಕೀಲರ ಸಂಘದಿಂದ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದು ಚೈತ್ರಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಚೈತ್ರಾ ಕೇವಲ ವಕೀಲೆ ಅಷ್ಟೇ ಆಗಿರದೆ ಒಳ್ಳೆಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದರು. ಅಲ್ಲದೇ ಅತ್ಯಂತ ದಿಟ್ಟ ಮಹಿಳೆ ಹಾಗೂ ಧೈರ್ಯವಂತೆಯಾಗಿದ್ದರು ಎಂಬ ಮಾತುಗಳು ಅವರ ಬಗ್ಗೆ ಕೇಳಿಬಂದಿತ್ತು

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago