ಬೆಂಗಳೂರು: ಇತ್ತೀಚೆಗೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಈ ಪ್ರಕರಣ ತನಿಖೆಯನ್ನು ಸಿಸಿಬಿ ವರ್ಗಾಯಿಸಿದ್ದಾರೆ.
ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಚೈತ್ರಾ ಜೊತೆಗೆ ಮಾತನಾಡಿರುವ ವ್ಯಕ್ತಿಗಳ ಕಾಲ್ ಲಿಸ್ಟ್ ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ. ಚೈತ್ರಾ ಮೊಬೈಲ್ ಲಾಕ್ ಆಗಿದ್ದು, ಅದನ್ನು ಓಪನ್ ಮಾಡಲು ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಅಲ್ಲದೇ ಚೈತ್ರಾ ಸಾವಿಗೂ ಹಿಂದಿನ 15 ದಿನಗಳ ಸಿಸಿಟಿವಿ ಪರಿಶೀಲನೆಗೆ ನಡೆಸುತ್ತಿದ್ದಾರೆ. ಸದ್ಯ ಚೈತ್ರಾ ಮರಣೋತ್ತರ ಪರೀಕ್ಷೆಯ ವರದಿಗಾಗಿ ಸಿಸಿಬಿ ಅಧಿಕಾರಿಗಳು ಕಾಯುತ್ತಿದ್ದಾರೆ.
ಮೇ 11 ರಂದು ಚೈತ್ರಾಗೌಡ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ನಲ್ಲಿ ಖಿನ್ನತೆಗೆ ಒಳಗಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿತ್ತು. ಅವರ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಬೆಂಗಳೂರು ವಕೀಲರ ಸಂಘದಿಂದ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದು ಚೈತ್ರಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.
ಚೈತ್ರಾ ಕೇವಲ ವಕೀಲೆ ಅಷ್ಟೇ ಆಗಿರದೆ ಒಳ್ಳೆಯ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿದ್ದರು. ಅಲ್ಲದೇ ಅತ್ಯಂತ ದಿಟ್ಟ ಮಹಿಳೆ ಹಾಗೂ ಧೈರ್ಯವಂತೆಯಾಗಿದ್ದರು ಎಂಬ ಮಾತುಗಳು ಅವರ ಬಗ್ಗೆ ಕೇಳಿಬಂದಿತ್ತು
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…