ದೇಶ

ಹೈದರಾಬಾದ್ ಕರ್ನಾಟಕ ಮಂದಿಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ ಸರಕಾರ…

ಮೋದಿ ಸರಕಾರ ಅಧಿಕಾರಕ್ಕೆ ಬಂದಂದಿನಿಂದ ಇಂದಿನವರೆಗೆ ಹಲವಾರು ಜನಪಯೋಗಿ ಯೋಜನೆಗಳನ್ನು ಜಾರಿಗೆ ತಂದಿದ್ದು ದೇಶದ ರಕ್ಷಣೆಯ, ರೈತರ ವಿಚಾರದಲ್ಲಿ, ರೈಲ್ವೆ ಇಲಾಖೆ ಉನ್ನತೀಕರಣ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಹಿಂದೆಂದೂ ಕಾಣದಂತೆ ಕ್ಷಿಪ್ರಗತಿಯ ಅಭಿವೃದ್ಧಿ ಸಾಧಿಸುತ್ತಿದ್ದು ದಶಕಗಳಿಂದ ಈಡೇರದೇ ಇರುವ ಜನರ ಹಲವಾರು ಬೇಡಿಕೆಗಳನ್ನು ಈಡೇರಿಸಿ ದೇಶವಾಸಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
http://clnk.in/fUjz
ಈಗ ಮತ್ತೊಮ್ಮೆ ಮೋದಿ ಸರಕಾರ ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಬಿಗ್ ಗಿಫ್ಟ್ ಒಂದನ್ನು ನೀಡಿದ್ದು. ಈ ಭಾಗದ ಜನರ ಹಲವು ದಶಕಗಳ ಕನಸನ್ನು ನನಸು ಮಾಡಿ ಸಿಹಿ ಸುದ್ದಿಯನ್ನು ಮೋದಿ ಸರಕಾರ ನೀಡಿದೆ. ಈ ಹಿಂದೆ ಬಿಸಿಲನಾಡು ಕಲಬುರಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಇತರ ಭಾಗಗಳ ಜನರಿಗೆ ಪ್ರಾಕೃತಿಕ ಸೌಂದರ್ಯ ಉಳ್ಳಂತಹ ಜಿಲ್ಲೆಗಳಿಗೆ ತೆರಳಲು ರೈಲಿನ ವ್ಯವಸ್ಥೆ ಇಲ್ಲದೆ ಪರಿತಪಿಸುತ್ತಿದ್ದರು. ಈಗ ಮೋದಿ ಸರಕಾರ ಇದಕ್ಕೆಲ್ಲಾ ಅಂತ್ಯ ಆಡಿದೆ.

ಕೇಂದ್ರ ಸರಕಾರವು ಕಲಬುರ್ಗಿಯಿಂದ ಹಾಸನ ಮಾರ್ಗದ ರೈಲು ಓಡಾಟಕ್ಕೆ ಹಸಿರು ನಿಶಾನೆ ತೋರಿಸಿದೆ. ಈ ಹಿಂದೆ ಹೈದರಾಬಾದ್ ಕರ್ನಾಟಕದ ಜನರು ಕರುನಾಡಿನ ಖ್ಯಾತ ಪ್ರವಾಸಿ ತಾಣಗಳಾದ ಚಿಕ್ಕಮಗಳೂರು ಹಾಗೂ ಹಾಸನ ಭಾಗಗಳಿಗೆ ಪ್ರವಾಸಕ್ಕೆ ತೆರಳಲು ಎರಡು ದಿನಗಳು ತಗಲುತ್ತಿದ್ದವು ಈ ಭಾಗಕ್ಕೆ ಪ್ರವಾಸಕ್ಕೆ ತೆರಳುವವರು ಒಂದು ವಾರಗಳಷ್ಟು ಇದಕ್ಕಾಗಿ ಮೀಸಲಿಡಬೇಕಿತ್ತು. ಆದರೆ ಇದೀಗ ಇದಕ್ಕೆಲ್ಲಾ ಅಂತ್ಯ ಆಡೋ ಸಮಯ ಬಂದಿದ್ದು ಈ ಹಿಂದೆ ಬೆಂಗಳೂರಿನವರೆಗೆ ಮಾತ್ರ ಸೀಮಿತವಾಗಿದ್ದ ಯಶವಂತಪುರ – ಸೊಲ್ಲಾಪುರ ರೈಲನ್ನು ಕೇಂದ್ರ ಸರಕಾರ ಇದೀಗ ಹಾಸನದವರೆಗೆ ವಿಸ್ತರಿಸಿ ಹೈದರಾಬಾದ್ ಕರ್ನಾಟಕದವರೆಗೆ ವಿಸ್ತರಣೆ ಮಾಡಲು ಮುಂದಾಗಿ ಆ ಭಾಗದ ಜನರಿಗೆ ಸಿಹಿಸುದ್ದಿಯನ್ನು ನೀಡಿದೆ.

ಈ ರೈಲು ಮುಂದಿನ ದಿನಗಳಲ್ಲಿ ಕಲಬುರಗಿಯಿಂದ ಪ್ರತಿನಿತ್ಯ ರಾತ್ರಿ 09 ಗಂಟೆಗೆ ಹೊರಡಿ ಬೆಳಗ್ಗೆ 10.30ಕ್ಕೆ ಹಾಸನ ರೈಲು ನಿಲ್ದಾಣವನ್ನು ತಲುಪಲಿದೆ. ಈ ಮೂಲಕ ವಾರಾಂತ್ಯದ ಪ್ರವಾಸಕ್ಕೆ ಹೋಗಲಿರುವ ಹೈದರಾಬಾದ್ ಕರ್ನಾಟಕ ಮಂದಿಗೆ ಮೋದಿ ಸರಕಾರ ಭರ್ಜರಿ ಗಿಫ್ಟ್ ನೀಡಿದೆ

\

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago